Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

September 1, 2025 | Siddesh
Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!
Share Now:

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ(Karnataka Labours Department) ವಿವಿಧ ಬಗ್ಗೆಯ ಕೆಲಸಗಳನ್ನು ನಿರ್ವಹಿಸುತ್ತಿರುವ ನೋಂದಾಯಿತ ಫಲಾನುಭವಿ ಕಾರ್ಮಿಕರಿಗೆ ಉಚಿತವಾಗಿ ಸುರಕ್ಷತಾ ಕಿಟ್ ಅನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

2025-26 ನೇ ಸಾಲಿನಲ್ಲಿ ಕಾರ್ಮಿಕ ಮಂಡಳಿಯಿಂದ ಕಾರ್ಮಿಕರು(Karnataka Labours Department Scheme) ಕೆಲಸ ನಿರ್ವಹಿಸುವ ಸಮಯದಲ್ಲಿ ಸುರಕ್ಷತೆಯನ್ನು ಸರಿಯಾಗಿ ಅನುಸರಿಸಲು ನೆರವಾಗಲು ಇದಕ್ಕೆ ಸಂಬಂದಪಟ್ಟ ಸುರಕ್ಷತಾ ಕಿಟ್ ಅನ್ನು ಉಚಿತವಾಗಿ ವಿತರಣೆ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಸಲ್ಲಿಸಲು ಮಂಡಳಿಯಿಂದ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: Beauty Parlour-ಉಚಿತ ಬ್ಯೂಟಿಪಾರ್ಲರ್ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಿ!

ಕಾರ್ಮಿಕ ಮಂಡಳಿಯಿಂದ ಉಚಿತವಾಗಿ ಸುರಕ್ಷತಾ ಕಿಟ್ ಅನ್ನು(Karmika Mandali Kit Application) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇಲಾಖೆಯಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ವಿವರ,ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಸೇರಿದಂತೆ ಇತ್ಯಾದಿ ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ.

Last Date For Application-ಅರ್ಜಿ ಸಲ್ಲಿಸಲು ಕಾರ್ಮಿಕ ಮಂಡಳಿಯಿಂದ ನಿಗದಿಪಡಿಸಿರುವ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ- 28 ಆಗಸ್ಟ್ 2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 02 ಸೆಪ್ಟೆಂಬರ್ 2025

ಇದನ್ನೂ ಓದಿ: Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

Who Can Apply For Karmika Mandali Yojana-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳೇನು?

ಕಾರ್ಮಿಕ ಮಂಡಳಿಯಿಂದ ಉಚಿತವಾಗಿ ಸುರಕ್ಷತಾ ಕಿಟ್ ಅನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಮಂಡಳಿಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ವಿವರ ಈ ಕೆಳಗಿನಂತಿದೆ:

  • ಅರ್ಜಿದಾರ ಕಾರ್ಮಿಕರು ಮಂಡಳಿಯ ನೋಂದಾಯಿತ ಸದಸ್ಯರಾಗಿರಬೇಕು.
  • ಈ ಹಿಂದನ ವರ್ಷದಲ್ಲಿ ಸುರಕ್ಷತಾ ಕಿಟ್ ಅನ್ನು ಪಡೆದಿರಬಾರದು.
  • ಅರ್ಜಿದಾರ ಕಾರ್ಮಿಕರು Mason,Plumber,Carpenter,Welder,Electrician,Painter ಕೆಲಸದಲ್ಲಿ ತೊಡಗಿರಬೇಕು.
  • ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.

ಇದನ್ನೂ ಓದಿ: Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

Karmika Mandali Kit

ಇದನ್ನೂ ಓದಿ: Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

ಯಾವೆಲ್ಲ ಜಿಲ್ಲೆಯ ಅರ್ಜಿ ಆಹ್ವಾನಿಸಲಾಗಿದೆ?

ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇತರೆ ಜಿಲ್ಲೆಯಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಒಮ್ಮೆ ಈ ಯೋಜನೆಯ ಲಭ್ಯತೆಯ ಆಧಾರದ ಮೇಲೆ ನಿಮ್ಮ ತಾಲ್ಲೂಕಿನ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ವಿಚಾರಿಸಿ ಅರ್ಜಿಯನ್ನು ಸಲ್ಲಿಸಬಹುದು.

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಕಾರ್ಮಿಕರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ನಿಮ್ಮ ತಾಲ್ಲೂಕಿನ ಕಾರ್ಮಿಕ ನಿರೀಕ್ಷರ ಕಚೇರಿಯನ್ನು ನೇರವಾಗಿ ಕೆಳಗಿನ ಪಟ್ಟಿಯಲ್ಲಿ ತಿಳಿಸಿರುವ ದಾಖಲಾತಿಗಳ ಸಮೇತ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಿ ಸುರಕ್ಷತಾ ಕಿಟ್ ಪಡೆಯಬಹುದು.

Documents For Karmika Mandali Scheme-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:

ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ಅನ್ನು ಪಡೆಯಲು ಅರ್ಜಿದಾರರು ಒದಗಿಸಬೇಕಾದ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:

1) ಅರ್ಜಿದಾರರ ಕಾರ್ಮಿಕ ಕಾರ್ಡ ಪ್ರತಿ(ಕಾರ್ಮಿಕ ಕಾರ್ಡಿನಲ್ಲಿ ವೃತ್ತಿಯ ಸ್ವರೂಪ ಎಂದು ಕಡ್ಡಾಯವಾಗಿ ನಮೂದಿಸಬೇಕು)
2) ಅಭ್ಯರ್ಥಿಯ ಆಧಾರ್ ಕಾರ್ಡ ಪ್ರತಿ.
3) ಪೋಟೋ

ಇದನ್ನೂ ಓದಿ: SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

ಮಂಡಳಿಯ ವಿಶೇಷ ಸೂಚನೆ: ಫಲಾನುಭವಿಗಳ ನೋಂದಣಿ ಹಿರಿತನದ ಆಧಾರದ ಮೇಲೆ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅರ್ಜಿದಾರರು ನಿಮ್ಮ ತಾಲ್ಲೂಕಿನ ಕಾರ್ಮಿಕ ನಿರೀಕ್ಷರ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಮಾಹಿತಿ ಪಡೆಯಬಹುದು ಅಥವಾ ಈ Click Here ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಇಲಾಖೆಯ ಜಾಲತಾಣವನ್ನು ಪ್ರವೇಶ ಮಾಡಿ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: