Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 2, 2025 | Siddesh
Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

2025-2026 ನೇ ಸಾಲಿನ ಪರಿವರ್ತನ್ ಶೈಕ್ಷಣಿಕ ಬಿಕ್ಕಟ್ಟು ವಿದ್ಯಾರ್ಥಿವೇತನ ಬೆಂಬಲ (ECSS) ಯೋಜನೆಯ ಅಡಿಯಲ್ಲಿ 1 ರಿಂದ 12 ನೇ ತರಗತಿಯ ಶಾಲಾ(Parivartan ECSS Scholarship) ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ ಮತ್ತು ಪಿಜಿ, ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ₹75,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು HDFC ಬ್ಯಾಂಕಿನಿಂದ ಪರಿವರ್ತನ್ ವಿದ್ಯಾರ್ಥಿವೇತನ(HDFC Bank Parivartan Scholarship) ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರ‍ೆಲ್ಲ ವಿದ್ಯಾರ್ಥಿಗಳು ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬಹುದು? ಅರ್ಜಿಗೆ ಸಂಬಂದಿಸಿದ ಅವಶ್ಯಕ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದರ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದೆ?

2025-2026 ನೇ ಸಾಲಿನ HDFC Bank Parivartan's ECSS Programme ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಈ ಕೆಳಗಿನಂತೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

  • 1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ: ₹ 15,000/-
  • ಸಾಮಾನ್ಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ₹ 35,000/-
  • ಸಾಮಾನ್ಯ ಪದವಿಪೂರ್ವ ವಿದ್ಯಾರ್ಥಿಗಳಿಗೆ: ₹ 30,000/-
  • ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ:- ₹ 75,000/-
  • 7 ರಿಂದ 12 ನೇ ತರಗತಿ ಮತ್ತು ITI,Diploma ವಿದ್ಯಾರ್ಥಿಗಳಿಗೆ:- ₹ 18,000/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಡಿಸೆಂಬರ್ 2025

ಇದನ್ನೂ ಓದಿ: Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸಲು ಯಾವ ಮಾನದಂಡಗಳನ್ನು ಹೊಂದಿರಬೇಕು?

ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

1ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳು,ITI,ಡಿಪ್ಲೋಮಾ ವಿದ್ಯಾರ್ಥಿಗಳು,ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ (Classes 1 to 12, or pursuing diploma, ITI, and polytechnic courses in private, government, or government-aided schools.M.Com,M.A, M.Tech, M.B.A,B.Com., B.Sc., B.A., B.C.A., etc., and professional courses such as B.Tech., M.B.B.S., L.L.B., B.Arch., Nursing) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.

ಇದನ್ನೂ ಓದಿ: Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹2.5 ಲಕ್ಷ ಮೀರಿರಬಾರದು.

ಶೈಕ್ಷಣಿಕ ವೆಚ್ಚವನ್ನು ಭರಿಸಲು ಕಷ್ಟಪಟ್ಟು ಶಾಲೆ ಅಥವಾ ಕಾಲೇಜು ತೊರೆಯುವ ಪರಿಸ್ಥಿತಿಗೆ ತಲುಪಿರುವ ವಿದ್ಯಾರ್ಥಿಗಳಿಗೆ ಈ ಯೋಜನೆದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ಸ್ಪಷ್ಟಪಡಿಸುತ್ತದೆ.

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು/ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

UGC ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗೆ ಅರ್ಹರಾಗಿರುತ್ತಾರೆ.

ಇದನ್ನೂ ಓದಿ: Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

ಇದನ್ನೂ ಓದಿ: Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

Step-1: ಮೊದಲು ಈ ಲಿಂಕ್ "Click Here" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಅಧಿಕೃತ ವೆಬ್ಸೈಟ್ಗೆ ಭೇಟಿ ಮಾಡಿದ ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ವೆಬ್ಸೈಟ್ಗೆ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ವಿದ್ಯಾರ್ಥಿಗಳು “Create an Account” ಆಯ್ಕೆ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ಬಳಿಕ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ Diploma, ITI ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar card

ಪ್ರಸ್ತುತ ವರ್ಷದ ಶುಲ್ಕ ರಶೀದಿ/Current year fee receipt

ಹಿಂದಿನ ತರಗತಿ ಅಂಕಪಟ್ಟಿ/Marks Card

ಆದಾಯ ಪ್ರಮಾಣ ಪತ್ರ/Income Certificate

ಜಾತಿ ಪ್ರಮಾಣ ಪತ್ರ/Caste Certificate

ಬ್ಯಾಂಕ್ ಪಾಸ್ ಪುಸ್ತಕ/Bank Passbook

ಫೋಟೊ/Photocopy

ಇದನ್ನೂ ಓದಿ: Labour Welfare Scholarship-ಕಾರ್ಮಿಕ ಇಲಾಖೆಯ ವತಿಯಿಂದ ₹20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

More Information-ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: