“ಗೃಹ ಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ! ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳೇನು?

June 18, 2023 | Siddesh

ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ಜನರಿಗೆ ಕಲ್ಪಿಸುವ ದೇಸೆಯಲ್ಲಿ ಒದಗಿಸಲು ದಿನಾಂಕ: 20.05.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಒದಗಿಸಲು ತಾತ್ವಿಕ ಅನುಮೋದನೆ ನೀಡಿದೆ.

“ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ.

ಈ ಯೋಜನೆಯನ್ನು ಜುಲೈ 2023 ರ ತಿಂಗಳು ವಿದ್ಯುತ್ ಬಳಕೆಗೆ ಆಗಸ್ಟ್ 2023 ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುತ್ತದೆ ಎಂದು ಸರಕಾರದ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಆರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

1. ಆಧಾರ್ ಕಾರ್ಡ್.
2. ವಿದ್ಯುತ್ ಬಿಲ್.
3. ವಿದ್ಯುತ್ ಖಾತೆ ಸಂಖ್ಯೆ(ಪ್ರತಿ ತಿಂಗಳು ನೀಡವ ವಿದ್ಯುತ್ ಬಿಲ್ ನಲ್ಲಿ ನಮೂದಿಸಿರುತ್ತಾರೆ)
4. ಮೊಬೈಲ್ ಸಂಖ್ಯೆ.

ಅರ್ಜಿ ಸಲ್ಲಿಕೆ ವಿಧಾನ:

ಅರ್ಜಿದಾರರು ಇಂದು(18-06-2023) ಬೆಳ್ಳಗೆ 2-00 ಗಂಟೆಯ ನಂತರ ರಾಜ್ಯ ಸರಕಾರದ ಸೇವಾ ಸಿಂಧು ಪೋರ್ಟಲ್ (https://sevasindhugs.karnataka.gov.in/about_kannada.html) ಭೇಟಿ ಮಾಡಿ ನೀವೇ ಸ್ವತಃ ನಿಮ್ಮ ಮೊಬೈಲ್ ಮೂಲಕ ಅಗತ್ಯ ವಿವರ ದಾಖಲಿಸಿ ಅರ್ಜಿ ಸಲ್ಲಿಸಬವುದಾಗಿದೆ ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್ , ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್, ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಬವುದು.

ಅರ್ಜಿ ಸಲ್ಲಿಕೆ ಕುರಿತು ಯಾವುದೇ ಪ್ರಶ್ನೆಗಳಿಗೆ ಈ ಕೆಳಗಿನ ಸಹಾಯವಾಣಿಗೆ ಕರೆ ಮಾಡಿ:

ಸಹಾಯವಾಣಿ-1: 1902

ಸಹಾಯವಾಣಿ-2: 08022279954 / 8792662814 / 8792662816

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು 30 ಜೂನ್ ಕೊನೆಯ ದಿನ.

ಗೃಹ ಜ್ಯೋತಿ ಯೋಜನೆಯ ನಿಯಮ ಮತ್ತು ಷರತ್ತುಗಳ ವಿವರ:

ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.

ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.

ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸಬೇಕು.

ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.

ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರತಿ ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು.

ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಲಾಗುವುದು.

ದಿನಾಂಕ: 30.06.2023 ರ ಅಂತ್ಯಕ್ಕೆ (ಜೂನ್ 2023 ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023 ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರು ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳುಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.

ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: