adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

January 3, 2024 | Siddesh
adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!
Share Now:

ಬಹುತೇಕ ಎಲ್ಲಾ ಸರಕಾರಿ ಯೋಜನೆಗಳ ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಫಲಾನುಭವಿಗಳಿಗೆ ಸಂದಾಯ ಮಾಡಲಾಗುತ್ತದೆ. ಈ ಕಾರಣದಿಂದಾಗ ನಾಗರಿಕರು ತಮ್ಮ ಆಧಾರ್ ವಿವರವನ್ನು ಸರಿಯಾಗಿ ನವೀಕರಿಸುದು ಅತ್ಯಗತ್ಯ.

ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ(Gruhalakshimi yojana)ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ಆ ಕೆಲಸವನ್ನು ತಪ್ಪದೇ ಮಾಡಿಕೊಳ್ಳಬೇಕು. ಯಾವುದು ಆ ಕೆಲಸ? ಸರಕಾರಿ ಯೋಜನೆಗಳ ಹಣವನ್ನು ಪಡೆಯಲು ಏನು ಮಾಡಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.

ಇತ್ತೀಚೇಗೆ ಕೆಲವು ತಿಂಗಳಿಂದ ಕೇಂದ್ರದ ಆಧಾರ್ ಕಾರ್ಡ ಪ್ರಾಧಿಕಾರದಿಂದ 10 ವರ್ಷ ಪೂರ್ಣಗೊಂಡಿರುವ ಅಂದರೆ ಕಳೆದ 10 ವರ್ಷದಲ್ಲಿ ಅಧಾರ್ ಕಾರ್ಡ ಅನ್ನು ನವೀಕರಣ ಮಾಡದೇ ಇರುವ ಎಲ್ಲಾ ಸಾರ್ವಜನಿಕರು ತಪ್ಪದೇ ಜೂನ್ ರ ಒಳಗಾಗಿ ಉಚಿತವಾಗಿ ತಮ್ಮ ತಮ್ಮ ಅಧಾರ್ ಕಾರ್ಡ ಅನ್ನು ನವೀಕರಣ ಮಾಡಿಕೊಳ್ಳಲು ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: Copra msp price-ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಮಾರಾಟದ ಕುರಿತು ರೈತರಿಗೆ ತುರ್ತು ಪ್ರಕಟಣೆ!

ಈ ಸಂಬಂಧ ಸಾರ್ವಜನಿಕರು ಇನ್ನು ಮುಂದೆ ಸರಕಾರಿ ಯೋಜನೆಗಳ ಹಣವನ್ನು ಪಡೆಯಲು 10 ವರ್ಷದಲ್ಲಿ ಆಧಾರ್ ಅಪ್ಡೇಟ್ ಮಾಡಿಕೊಳ್ಳದವರು ಕೂಡಲೇ ತಮ್ಮ ತಮ್ಮ ಅಧಾರ್ ಕಾರ್ಡಗಳನ್ನು ಅಪ್ಡೇಟ್ ಮಾಡಿಕೊಳ್ಳಬೇಕು.

Last date for adhar update- ಅಧಾರ್ ಕಾರ್ಡ ಅಪ್ಡೇಟ್ ಮಾಡಿಕೊಳ್ಳಲು ಕೊನೆಯ ದಿನಾಂಕ: 15 ಜೂನ್ 2024

How to update adhar card- ನಿಮ್ಮ ಮೊಬೈಲ್ ನಲ್ಲಿ ಆಧಾರ್ ಕಾರ್ಡ ಅಪ್ಡೇಟ್ ಮಾಡುವ ವಿಧಾನ:

ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ಆಧಾರ್ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಈ ಕೆಳಗೆ ವಿವರಿಸಿರುವ ವಿಧಾನವನ್ನು ನಿಮ್ಮ ಮೊಬೈಲ್ ನಲ್ಲೇ ಆಧಾರ್ ಕಾರ್ಡ ಅನ್ನು ನವೀಕರಣಕ್ಕೆ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Aadhar update link ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Yashaswini Yojana-2024: ಯಶಸ್ವಿನಿ ಯೋಜನೆ ಕಾರ್ಡದಾರರಿಗೆ ಭರ್ಜರಿ ಸಿಹಿ ಸುದ್ದಿ! 

Step-2: ನಂತರ "Login" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ಅಧಾರ್ ಕಾರ್ಡ ಸಂಖ್ಯೆ ಮತ್ತು ಕ್ಯಾಪ್ಚ್ ಕೋಡ್ ಅನ್ನು ಹಾಕಿ "Send OTP" ಬಟನ್ ಮೇಲೆ ಕ್ಲಿಕ್ ಮಾಡಿ ಒಟಿಪಿ ಅನ್ನು ನಮೂದಿಸಿ ಲಾಗಿನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಇದಾದ ಬಳಿಕ ಈ ಪೇಜ್ ನಲ್ಲಿ "Document update" ಎಂದು ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ ಇಲ್ಲಿ "Next" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ಈ ಪುಟದಲ್ಲಿ ನಿಮ್ಮ ಅಧಾರ್ ಕಾರ್ಡ ನಲ್ಲಿ ಇರುವ ಹಾಗೆಯೇ ನಿಮ್ಮ ಹೆಸರು,ಹುಟ್ಟಿದ ದಿನಾಂಕ ಮತ್ತು ವಿಳಾಸದ ವಿವರ ಸರಿಯಾಗಿದಿಯೇ ಎಂದು ಚೆಕ್ ಮಾಡಿ "I verify above details are correct" ಬಟನ್ ಮೇಲೆ ಕ್ಲಿಕ್ ಮಾಡಿ "Next" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!

Step-5: ಮೇಲಿನ ಹಂತಗಳನ್ನು ಪೂರ್ಣಗೊಳಿಸಿದ ಬಳಿಕ ಈ ಪೇಜ್ ನಲಿ ನಿಮ್ಮ ಗುರುತಿನ್ನ ಪುರಾವೆ ಮತ್ತು ವಿಳಾಸ ಪುರಾವೆ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Next" ಬಟನ್ ಮೇಲೆ ಒತ್ತಿ "Submit" ಮೇಲೆ ಕ್ಲಿಕ್ ಮಾಡಬೇಕು.

Required documents-ಅಗತ್ಯ ದಾಖಲಾತಿ ಮಾಹಿತಿ:

1)ಅಧಾರ್ ಕಾರ್ಡ
2)ಮೊಬೈಲ್ ನಂಬರ್
3)ಗುರುತಿನ ಚೀಟಿ/ಪಡಿತರ ಚೀಟಿ
4)ಪಾನ್ ಕಾರ್ಡ/ಗ್ಯಾಸ್ ಬಿಲ್

Aadhar helpline number-ಇನ್ನು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 1947
adhar update link- Click here

ಇದನ್ನೂ ಓದಿ: BNPM Job- ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ನಿಗಮದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ!

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: