Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026 | Siddesh
Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!
Share Now:

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ ಮಹತ್ವದ ಕಲ್ಯಾಣ ಯೋಜನೆಗಳಲ್ಲಿ ಒಂದಾಗಿದ್ದು, ಸ್ವಂತ ಜಮೀನನ್ನು ಹೊಂದಿಲ್ಲದ ಬಡ ಕುಟುಂಬಗಳಿಗೆ ಭೂಮಿಯನ್ನು ನೀಡುವ ಮೂಲಕ ಆರ್ಥಿಕ ಸಹಾಯವನ್ನು ನೀಡಿ ಅವರ ಮುಂದಿನ ಜೀವನಕ್ಕೆ ಬೆಂಬಲವನ್ನು ನೀಡುವುದೇ ಈ ಯೋಜನೆಯ ಉದ್ದೇಶವಾಗಿದೆ.

ಇದನ್ನೂ ಓದಿ: Anabe Krishi Subsidy-ಅಣಬೆ ಕೃಷಿಯನ್ನು ಪ್ರಾರಂಭಿಸಲು ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

ಈ ಯೋಜನೆಯ ಸಹಾಯಧನವನ್ನು(Bhoo Odetana Scheme Subsidy) ಪಡೆಯಲು ಯಾರೆಲ್ಲ ಅರ್ಹರು? ಸಹಾಯಧನವನ್ನು ಹೇಗೆ ಪಡೆಯಬೇಕು? ಅದಕ್ಕೆ ಸಂಭಂದಿಸಿದ ದಾಖಲಾತಿಗಳಾವುವು? ಈ ಯೋಜನೆಯ ಉದ್ದೇಶವೇನು? ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳಲಾಗಿದೆ.

Land Ownership Scheme-ಭೂ ಒಡೆತನ ಯೋಜನೆ ಎಂದರೇನು?

ಈ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದ್ದು, ಭೂಮಿ ಇಲ್ಲದ ಕುಟುಂಬಗಳು ಅಥವಾ ಸ್ವಂತ ಜಮೀನನ್ನು ಖರೀದಿ ಮಾಡಲು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವವರ ಕುಟುಂಬಗಳಿಗೆ ಸರ್ಕಾರವು ಆರ್ಥಿಕ ಸಹಾಯದಿಂದ ತಮ್ಮದೇ ಸ್ವಂತ ಜಮೀನನ್ನು ಖರೀದಿ ಮಾಡಲು ಅವಕಾಶವನ್ನು ನೀಡುವ ಯೋಜನೆಯೇ ಭೂ ಒಡೆತನ ಯೋಜನೆ.

ಇದನ್ನೂ ಓದಿ: Free Neurology Treatment-ನರಮಂಡಲ ರೋಗಿಗಳಿಗೆ ಸರ್ಕಾರದಿಂದ 2 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

Bhoo Odetana Yojane-ಈ ಯೋಜನೆಯನ್ನು ಜಾರಿಗೆ ತರಲು ಉದ್ದೇಶವೇನು?

ಗ್ರಾಮೀಣ ಭಾಗದಲ್ಲಿ ಕೃಷಿ ಭೂಮಿಯನ್ನು ಹೊಂದಿಲ್ಲದ ಪರಿಶಿಷ್ಟ ಜಾತಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ನಾಗರಿಕರಿಗೆ ಕೃಷಿ ಜಮೀನನ್ನು ಹೊಂದಲು ಸಹಾಯಧನವನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

Who Can Apply For Bhoo Odetana Scheme-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಭೂ ಒಡೆತನ ಯೋಜನೆಯಡಿ ಕೃಷಿ ಜಮೀನನ್ನು ಖರೀದಿ ಮಾಡಲು ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎನ್ನುವ ವಿವರ ಹೀಗಿದೆ:

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರು ಭೂ ರಹಿತ ಕೃಷಿ ಕಾರ್ಮಿಕರಾಗಿರಬೇಕು.

ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವರ್ಗಕ್ಕೆ ಸೇರಿದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

Bhoo Odetana Scheme Details-ಯಾವೆಲ್ಲ ನಿಗಮದಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ?

ಪ್ರಸ್ತುತ ನಮ್ಮ ರಾಜ್ಯದಲ್ಲಿ 4 ನಿಗಮಗಳಿಂದ ಈ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು ಇವುಗಳ ಪಟ್ಟಿ ಈ ಕೆಳಗೆ ತಿಳಿಸಲಾಗಿದೆ.

1) ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ.
2) ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ.
3) ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ.
4) ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ.

How To Apply For Bhoo Odetana Yojane-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅರ್ಜಿದಾರರು ಅಗತ್ಯವಿರುವ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಸಂಬಂಧಪಟ್ಟ ನಿಗಮಗಳ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದಾಗ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: JK Tyre Scholarship-ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ 25,000 ವಿದ್ಯಾರ್ಥಿವೇತನಕ್ಕೆ ಅರ್ಜಿ!

Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು?

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಸೇವಾ ಸಿಂಧು ಪೋರ್ಟಲ್ ಅಥವಾ ಸಂಬಂಧಪಟ್ಟ ನಿಗಮದ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ವಿವಿಧ ನಿಗಮಗಳಿಂದ ಅವಕಾಶ ಒದಗಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಈ ಕೆಳಗಿನಂತಿದೆ:

Step-1: ಅರ್ಜಿದಾರರು ಮೊದಲಿಗೆ ಈ "Bhoo Odetana Yojane Online Application" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

Bhoo Odetana Yojana

Step-2: ಇದಾದ ಬಳಿಕ ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಪ್ರವೇಶ ಮಾಡುತ್ತಿರುವ ಫಲಾನುಭವಿಗಳು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಆದ ಬಳಿಕ ಯೋಜನೆ ವಿಭಾಗದ ಮೇಲೆ ಕ್ಲಿಕ್ ಮಾಡಿ "Bhoo Odetana Yojane" ಎಂದು ಸರ್ಚ್ ಮಾಡಿ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

Required Documents For Bhoo Odetana Scheme-ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

ಅರ್ಜಿದಾರರ ಆಧಾರ್ ಕಾರ್ಡ/Aadhar
ಭೂ ರಹಿತರಾಗಿರುವ ಬಗ್ಗೆ ತಹಶೀಲ್ದಾರರಿಂದ ಪ್ರಮಾಣ ಪತ್ರ.
ಪೋಟೋ/Photo
ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And Income Certificate
ಬ್ಯಾಂಕ್ ಪಾಸ್ ಬುಕ್/Bank Pass Book
ಕೃಷಿ ಕಾರ್ಮಿಕರ ದೃಢೀಕರಣ ಪತ್ರ/Labour Certificate

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: