Business subsidy loan-ಸ್ವಂತ ಉದ್ಯೋಗ ಆರಂಭಿಸಲು ಸಬ್ಸಿಡಿಯಲ್ಲಿ ₹2 ಲಕ್ಷ ಪಡೆಯಲು ಅರ್ಜಿ!

June 4, 2025 | Siddesh
Business subsidy loan-ಸ್ವಂತ ಉದ್ಯೋಗ ಆರಂಭಿಸಲು ಸಬ್ಸಿಡಿಯಲ್ಲಿ ₹2 ಲಕ್ಷ ಪಡೆಯಲು ಅರ್ಜಿ!
Share Now:

ರಾಜ್ಯ ಸರ್ಕಾರದಿಂದ ಸ್ವಂತ ಉದ್ಯೋಗವನ್ನು(Business loan Yojana) ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಲು ದೇವರಾಜ ಅರಸು ನಿಗಮದಿಂದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಸಬ್ಸಿಡಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ನಿಗಮದಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ(Business loan subsidy Scheme) ಯೋಜನೆಯಡಿ ನಿರುದ್ಯೋಗಿ ಯುವಕ/ಯುವತಿಯರಿಗೆ ಕೃಷಿ ಅವಲಂಬಿತ ಚಟುವಟಿಕೆ,ವ್ಯಾಪಾರ,ಕೈಗಾರಿಕೆ,ಸಾರಿಗೆ ಮತ್ತು ಸೇವಾ ವಲಯದಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಸಬ್ಸಿಡಿ ಪಡೆಯಲು ಯಾರೆಲ್ಲ(subsidy loan For Business) ಅರ್ಜಿ ಸಲ್ಲಿಸಬಹುದು? ಇದಕ್ಕಾಗಿ ನಿಗಮದಿಂದ ಯಾವೆಲ್ಲ ನಿಯಮಗಳನ್ನು ಜಾರಿಗೆ ತರಲಾಗಿದೆ? ಅರ್ಜಿದಾರರು ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳೇನು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿ ಸೇರಿದಂತೆ ಇನ್ನಿತರೆ ಸಂಪೂರ್ಣ ವಿವರವನ್ನು ಈ ಕೆಳಗ ಹಂಚಿಕೊಳ್ಳಲಾಗಿದೆ.

Self employment subsidy loan- ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಈ ಕೆಳಗಿನಂತೆ ಸಹಾಯಧನವನ್ನು ನೀಡಲಾಗುತ್ತದೆ.

ಈ ಯೋಜನೆಯಲ್ಲಿ ನಿಗಮವು ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2,00,00/-ಗಳ ಆರ್ಥಿಕ ನೆರವು ಒದಗಿಸಲಾಗುತ್ತದೆ ಮತ್ತು ಈ ಮೊತ್ತದಲ್ಲಿ ಗರಿಷ್ಠ ರೂ.30,000/-ಗಳ ಸಹಾಯಧನ, ಬಾಕಿ ಉಳಿಕೆ ಮೊತ್ತವಾದ ಗರಿಷ್ಠ ರೂ.1,70,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.

ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ಹಾಗೂ ಇದರಲ್ಲಿ 2 ತಿಂಗಳು ವಿರಾಮ ಅವಧಿ ಇರುತ್ತದೆ.

ಇದನ್ನೂ ಓದಿ: Free sewing machine-ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

Business loan eligibility criteria- ಯಾರೆಲ್ಲ ಅರ್ಜಿ ಸಲ್ಲಿಸಬಹುದು:

ದೇವರಾಜ ಅರಸು ನಿಗಮದಿಂದ ಸಹಾಯಧನದಲ್ಲಿ ಉಚಿತವಾಗಿ ಕೊಳವೆ ಬಾವಿಯನ್ನು ಕೊರೆಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಈ ಕೆಳಗಿನಂತಿದೆ.


ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ-98,00/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/-ಗಳ ಮಿತಿ ಒಳಗಿರಬೇಕು.

ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದೊಳಗಿನವರಾಗಿರಬೇಕು.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.

ಒಂದು ಕುಟುಂಬದಲ್ಲಿ ಒಂದು ಫಲಾನುಭವಿಯನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್ 2025

ಇದನ್ನೂ ಓದಿ: Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

Business loan subsidy

How to apply Business subsidy Yojana- ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ನಿಮ್ಮ ಮೊಬೈಲ್ ಮೂಲಕ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

Business subsidy scheme Online Application-ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಸೇವಾ ಸಿಂಧು ವೆಬ್ಸೈಟ್ ಅನ್ನು ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಇದಕ್ಕಾಗಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಬೇಕು.

Step-1: ಅಭ್ಯರ್ಥಿಗಳು ಈ ವೆಬ್ಸೈಟ್ Online Application ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಬಳಕೆದಾರ ಐಡಿ ಮತ್ತು ಪಾಸ್ವರ್ಡ್/OTP ಅನ್ನು ಈಗಾಗಲೇ ರಚನೆ ಮಾಡಿಕೊಂಡಿರುವವರು ಅದನ್ನು ಲಾಗಿನ್ ವಿಭಾಗದಲ್ಲಿ ಹಾಕಿ ಲಾಗಿನ್ ಬಟನ್ ಮೇಲೆ ಒತ್ತಿ ಲಾಗಿನ್ ಅಗಬೇಕು.

Step-3: ನಂತರ ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ದಾಖಲಾತಿಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Poultry farm-ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ! ಕೋಳಿ ಸಾಕಾಣಿಕೆಗೆ ಸಬ್ಸಿಡಿ ಯೋಜನೆಗಳು!

Documents- ಅಗತ್ಯ ದಾಖಲಾತಿಗಳು:

1) ಆಧಾರ್ ಕಾರ್ಡ/Aadhar
2) ಬ್ಯಾಂಕ್ ಖಾತೆ ಪುಸ್ತಕ ಪ್ರತಿ/Pass book
3) ಪೋಟೋ/Photo
4) ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and income
5) ಕುಟುಂಬದ ರೇಶನ್ ಕಾರ್ಡ ಪ್ರತಿ/Ration Card
6) ಮೊಬೈಲ್ ನಂಬರ್/Mobile Number

ಇದನ್ನೂ ಓದಿ: Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

Notification Details-ಅಧಿಕೃತ ಪ್ರಕಟಣೆ ಪ್ರತಿ:

business loan

ಇದನ್ನೂ ಓದಿ: Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

For More Information-ಇನ್ನು ಹೆಚ್ಚಿನ ಮಾಹಿತಿಗಾಗಿ:

ದೇವರಾಜ ಅರಸು ನಿಮಗದ ಅಧಿಕೃತ ವೆಬ್ಸೈಟ್- Click here
ಅರ್ಜಿ ಸಲ್ಲಿಸಲು ಸೇವಾ ಸಿಂಧು ಜಾಲತಾಣ- Apply Now
ಸಹಾಯವಾಣಿ: 80-22374832, 8050770004, 805077000

WhatsApp Group Join Now
Telegram Group Join Now
Share Now: