Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

June 4, 2025 | Siddesh
Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!
Share Now:

ದೇವರಾಜ ಅರಸು ನಿಗಮ(Devaraj arasu nigama)ದಿಂದ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಉಚಿತವಾಗಿ ಬೋರ್ವಲ್(Borewell subsidy) ಅನ್ನು ಕೊರೆಸಲು ಅರ್ಹ ರೈತರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಣ್ಣ ಮತ್ತು ಅತಿ ಸಣ್ಣ ರೈತರು ಜಮೀನಿನಲ್ಲಿ ತೋಟಕಾರಿಗೆ ಬೆಳೆಗಳನ್ನು ಹಾಕಿ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಉಚಿತವಾಗಿ ಕೊಳವೆ ಬಾವಿಯನ್ನು(Ganga kalyana yojane-2025) ಕೊರೆಸಲು ನಿಗಮದಿಂದ ಪ್ರತಿ ವರ್ಷ ಗಂಗಾ ಕಲ್ಯಾಣ ಯೋಜನೆಯಡಿ ಈ ಸೌಲಭ್ಯವನ್ನು ಒದಗಿಸಲು ಅರ್ಜಿಯನ್ನು ಕರೆಯಲಾಗುತ್ತದೆ ಇದೆ ಮಾದರಿಯಲ್ಲಿ ಈ ವರ್ಷ ಪ್ರಸ್ತುತ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Free sewing machine-ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

ಉಚಿತ ಬೋರ್ವೆಲ್(Ganga Kalyana)ಅನ್ನು ಕೊರೆಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇದಕ್ಕಾಗಿ ನಿಗಮದಿಂದ ಯಾವೆಲ್ಲ ನಿಯಮಗಳನ್ನು ರೂಪಿಸಲಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

Ganga Kalyana Subsidy Amount Details- ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಸಹಾಯಧನ ವಿವರ:

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ನಿಗಮದಿಂದ ಸಹಾಯಧನವನ್ನು ಭರಿಸಲಾಗುತ್ತದೆ ಇದರ ವಿವರ ಈ ಕೆಳಗಿನಂತಿದೆ.

A) ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ.4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೂಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುತ್ತದೆ.

B) ಉಳಿದ ಜಿಲ್ಲೆಗಳಿಗೆ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.

ಇದನ್ನೂ ಓದಿ: Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

Ganga kalyana yojana eligibility criteria- ಯಾರೆಲ್ಲ ಅರ್ಜಿ ಸಲ್ಲಿಸಬಹುದು:

ದೇವರಾಜ ಅರಸು ನಿಗಮದಿಂದ ಸಹಾಯಧನದಲ್ಲಿ ಉಚಿತವಾಗಿ ಕೊಳವೆ ಬಾವಿಯನ್ನು ಕೊರೆಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಈ ಕೆಳಗಿನಂತಿದೆ.

(1) ಸಣ್ಣ ಮತ್ತು ಅತಿ ಸಣ್ಣ ರೈತರ ವರ್ಗಕ್ಕೆ ಸೇರಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

(2) ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

(3) ಅರ್ಜಿದಾರ ಅಭ್ಯರ್ಥಿಯು ಯಾವುದೇ ರಾಜ್ಯ-ಕೇಂದ್ರ ಸರಕಾರದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರಬಾರದು.

(4) ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಭಾಗದಲ್ಲಿ ರೂ 98,000/- ನಗರ ಪ್ರದೇಶದಲ್ಲಿ ರೂ 1,20,000/- ಮಿತಿಯೊಳಗಿರಬೇಕು.

(5) ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

(6) ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

ಇದನ್ನೂ ಓದಿ: Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

How to apply ganga kalyana scheme- ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ರೈತರು ಈ ಯೋಜನೆಯ ಪ್ರಯೋಜನ ಪಡೆಯಲು ನಿಮ್ಮ ಮೊಬೈಲ್ ಮೂಲಕ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

Ganga Kalyana Online Application-ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಸೇವಾ ಸಿಂಧು ವೆಬ್ಸೈಟ್ ಅನ್ನು ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಇದಕ್ಕಾಗಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಬೇಕು.

Step-1: ಪ್ರಥಮದಲ್ಲಿ ಈ Ganga Kalyana Online Application ವೆಬ್ಸೈಟ್ ಲಿಂಕ್ ಮೇಲೆ ಒತ್ತಿ ಸೇವಾ ಸಿಂಧು ಪೋರ್ಟಲ್ ಅನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Poultry farm-ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ! ಕೋಳಿ ಸಾಕಾಣಿಕೆಗೆ ಸಬ್ಸಿಡಿ ಯೋಜನೆಗಳು!

Step-2: ತದನಂತರ ಬಳಕೆದಾರ ಐಡಿ ಮತ್ತು ಪಾಸ್ವರ್ಡ್/OTP ಅನ್ನು ಈಗಾಗಲೇ ರಚನೆ ಮಾಡಿಕೊಂಡಿರುವವರು ಅದನ್ನು ಲಾಗಿನ್ ಕಾಲಂ ನಲ್ಲಿ ನಮೂದಿಸಿ ಲಾಗಿನ್ ಬಟನ್ ಮೇಲೆ ಒತ್ತಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ದಾಖಲಾತಿಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Ganga Kalyana Documents- ಅಗತ್ಯ ದಾಖಲಾತಿಗಳು:

1) ರೈತರ ಆಧಾರ್ ಕಾರ್ಡ ಪ್ರತಿ
2) ಬ್ಯಾಂಕ್ ಖಾತೆ ಪುಸ್ತಕ ಪ್ರತಿ.
3) ಪೋಟೋ.
4) ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
5) ಜಮೀನಿನ ಪಹಣಿ/RTC.
6) ಕುಟುಂಬದ ರೇಶನ್ ಕಾರ್ಡ ಪ್ರತಿ.
7) ಸಣ್ಣ ಹಿಡುವಳಿ ಪ್ರಮಾಣ ಪತ್ರ(ಗ್ರಾಮ ಲೆಕ್ಕಾಧಿಕಾರಿ ಕಚೇರಿಯಲ್ಲಿ ಪಡೆಯಬೇಕು)
8) ಕೊಳವೆ ಬಾವಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ((ಗ್ರಾಮ ಲೆಕ್ಕಾಧಿಕಾರಿ ಕಚೇರಿಯಲ್ಲಿ ಪಡೆಯಬೇಕು)
9) ಮೊಬೈಲ್ ಸಂಖ್ಯೆ.

ಇದನ್ನೂ ಓದಿ: Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

Notification Copy-ಅಧಿಕೃತ ಪ್ರಕಟಣೆಯನ್ನು ನೋಡಲು ಈ ವಿಧಾನ ಅನುಸರಿಸಿ:

ಅರ್ಜಿದಾರರು ದೇವರಾಜ ಅರಸು ನಿಗಮದಿಂದ ಪ್ರಸ್ತುತ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಿರುವ ಅಧಿಕೃತ ಪ್ರಕಟಣೆಯನ್ನು ನೋಡಲು ಈ ಕೆಳಗಿನ ವಿಧಾನವನ್ನು ಅನುಸರಿಸಿ.

Step-1: ಮೊದಲಿಗೆ ಈ Download Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Ganga Kalyana Yojana

ಇದಾದ ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ "ಸುದ್ದಿ ಮತ್ತು ಘಟನೆಗಳು" ಕಾಲಂ ನಲ್ಲಿ "ಮತ್ತಷ್ಟು ಓದಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಇಲ್ಲಿ "2025-26ನೇ ಸಾಲಿನಲ್ಲಿ ನಿಗಮದಲ್ಲಿಅನುಷ್ಠಾನಗೊಳಿಸುತ್ತಿರುವ ಎಲ್ಲಾ ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆಯನ್ನು ಸೇವಾ ಸಿಂಧು ಪೋರ್ಟಲ್‌ ಮುಖಾಂತರ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/06/2025 ಆಗಿದೆ" ಈ ರೀತಿಯ ಬಟನ್ ಗೋಚರಿಸುತ್ತದೆ ಇದರ ಮೇಲೆ ಕ್ಲಿಕ್ ಮಾಡಿದರೆ ಅಧಿಕೃತ ಪ್ರಕಟಣೆ ಪ್ರತಿ ತೆರೆದುಕೊಳ್ಳುತ್ತದೆ.

ಇದನ್ನೂ ಓದಿ: Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

Ganga kalyana online application-ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:

ನಿಮಗದ ಜಾಲತಾಣ: Click here
ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್: Apply Now
ಸಹಾಯವಾಣಿ: 80-22374832, 8050770004, 805077000

WhatsApp Group Join Now
Telegram Group Join Now
Share Now: