Milk Incentive-2023: ಹಾಲಿನ ಪ್ರೋತ್ಸಾಹ ಧನ ಇಲ್ಲಿದೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ!

September 21, 2023 | Siddesh

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಅರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದ ಕರ್ನಾಟಕ ಹಾಲು ಮಹಾಮಂಡಳಿ(KMF)ಯ  ಡೈರಿಗಳಿಗೆ ಹಾಲನ್ನು ಪೂರೈಸುವ ರೈತರಿಗೆ ಪ್ರತಿ ಲೀಟರ್ ಗೆ 5 ರೂ ಸಹಾಯಧನವನ್ನು(Milk Incentive) ರಾಜ್ಯ ಸರಕಾರದಿಂದ ವರ್ಗಾಹಿಸಲಾಗುತ್ತದೆ.

ಅದರೆ ಈ ಸಹಾಯಧನವು ರೈತರಿಗೆ ಸಕಾಲದಲ್ಲಿ ಬರುತ್ತಿಲ್ಲ ಮತ್ತು ಸಹಾಯಧನ ಎಷ್ಟು ಲೀಟರ್ ಹಾಲಿಗೆ ಜಮಾ ಅಗಿದೆ ಮತ್ತು ಯಾವ ದಿನದಂದು ಎಷ್ಟು ಹಣ ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಎಲ್ಲಿ ವಿಚಾರಿಸಬೇಕು ಎಂದು ಅನೇಕ ರೈತರಿಗೆ ಮಾಹಿತಿ ಇರುವುದಿಲ್ಲ.

ಈ ಅಂಕಣದಲ್ಲಿ ರೈತರು ಡೈರಿಗೆ ಹಾಕುವ ಹಾಲಿಗೆ ಯಾವ ತಿಂಗಳು ಎಷ್ಟು ಸಹಾಯಧನ ಬಂದಿದೆ  ಎಂದು ತಮ್ಮ ತಮ್ಮ ಮೊಬೈಲ್ ನಲ್ಲೇ ಅಧಾರ್ ನಂಬರ್ ಹಾಕಿ ಹೇಗೆ ಚೆಕ್ ಮಾಡಬೇಕು ಎಂದು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ ಈ ಮಾಹಿತಿ ಉಪಯುಕ್ತ ಎಂದು ನಿಮಗೆ ಅನಿಸಿದಲ್ಲಿ ತಪ್ಪದೇ ನಿಮ್ಮ ಅಪ್ತರಿಗೂ ಶೇರ್ ಮಾಡಿ ನಮ್ಮ ಈ ಮಾಹಿತಿ ಹಂಚುವಿಕೆ ಪ್ರಯತ್ನಕ್ಕೆ ಪ್ರೋತ್ಸಾಹಿಸಿ.

ಇದನ್ನೂ ಓದಿ: KRP portal-ಕೇಂದ್ರ ಸರಕಾರದಿಂದ ರೈತರಿಗೆ ಸಾಲ ವಿತರಣೆಗೆ ಏಕೀಕೃತ ಪೋರ್ಟಲ್ ಗೆ ಚಾಲನೆ!

Milk Incentive status check- ಹಾಲಿನ ಪ್ರೋತ್ಸಾಹ ಧನ ಹಣ ಜಮಾ ಅಗಿರುವುದನ್ನು ಚೆಕ್ ಮಾಡಲು 2 ವಿಧಾನಗಳಿವೆ:

ವಿಧಾನ-1: "DBT Karnataka" ಮೊಬೈಲ್ ಅಪ್ಲಿಕೇಶನ್ ಮೂಲಕ ಚೆಕ್ ಮಾಡಬವುದು

ರೈತರು ರಾಜ್ಯ ಸರಕಾರದಿಂದ ಡಿಬಿಟಿ ಯೋಜನೆಗಳ ಹಣ ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳಲು ಅಭಿವೃದ್ದಿಪಡಿಸಿರುವ ಈ DBT Karnataka ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಹಣ ವರ್ಗಾವಣೆ ಅಗಿರುವುದನ್ನು ತಿಳಿಯಬವುದು.

Step-1: ಮೊದಲಿಗೆ ಈ https://play.google.com/store/apps/details?id=com.dbtkarnataka ಲಿಂಕ್ ಮೇಲೆ ಕ್ಲಿಕ್ ಮಾಡಿ ಪ್ಲೇ ಸ್ಟೋರ್ ಭೇಟಿ ಮಾಡಿ DBT Karnataka mobile app ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Step-2:  ತದನಂತರ ನಿಮ್ಮ ಮನೆಯಲ್ಲಿ ನೀವು ಯಾರ ಹೆಸರಿನಲ್ಲಿ ಡೈರಿಗೆ ಹಾಲು ಪೂರೈಕೆ ಮಾಡುತ್ತಿರೋ ಅವರ ಆಧಾರ್ ಸಂಖ್ಯೆಯನ್ನು ಹಾಕಿ ನಂತರ ಮೊಬೈಲ್ ಗೆ ಬರುವ OTP ನಮೂದಿಸಿ 4 ಅಂಕಿಯ ಪಾಸ್ವರ್ಡ್ ರಚನೆ ಮಾಡಿಕೊಂಡು "Login" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಗಮನಿಸಿ: ಮೊದಲ ಬಾರಿಗೆ OTP ಬರದೇ ಇದ್ದರೆ Resend OTP ಮೇಲೆ ಕ್ಲಿಕ್ ಮಾಡಿ ಮತ್ತೊಮ್ಮೆ ಪ್ರಯತ್ನಿಸಿ.

Step-3: ಇದಾದ ಬಳಿಕ ಈ ಅಪ್ಲಿಕೇಶನ್ ಗೆ ಲಾಗಿನ್ ಆಗುತ್ತದೆ ಇಲ್ಲಿ ಕನ್ನಡ/English ಆಯ್ಕೆ ಬಲಬದಿಯಲ್ಲಿ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಕನ್ನಡ ಭಾಷೆ ಆಯ್ಕೆ ಮಾಡಿಕೊಂಡು ನಂತರ ಮುಖಪುಟದಲ್ಲಿ ಕಾಣುವ "ಪಾವತಿ ಸ್ಥಿತಿ" ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: ಬರಗಾರ ಘೋಷಣೆ: ಯಾವೆಲ್ಲ ಸವಲತ್ತು ಸಿಗಲಿದೆ ಈ ಪಟಿಯಲ್ಲಿರುವ ತಾಲ್ಲೂಕುಗಳಿಗೆ!

Step-4: ಇಲ್ಲಿ ಫಲಾನುಭವಿಯ ಡಿಬಿಟಿ ಯೋಜನೆ ಮಾಹಿತಿ ಗೋಚರಿಸುತ್ತದೆ "ಹಾಲು ಉತ್ಪಾದಕರಿಗೆ ಪ್ರೋತ್ಸಾಧನ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಯಾವ ಯಾವ ತಿಂಗಳು ಎಷ್ಟು ಹಣ ವರ್ಗಾವಣೆ ಅಗಿದೆ ಎಂದು ತೋರಿಸುತ್ತದೆ.

ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ ಎಂದು ತಿಳಿಯಲು ಇದೆ ಅಪ್ಲಿಕೇಶನ್ ನ ಮುಖಪುಟದಲ್ಲಿ ಕಾಣುವ "ಬ್ಯಾಂಕ್ ಖಾತೆಯೋಂದಿಗೆ ಆಧರ್ ಸಂಯೋಜನೆಯ ಸ್ಥಿತಿ" ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಅಗಿದೆ ಎಂದು ತೋರಿಸುತ್ತದೆ ಇದೆ ಖಾತೆಗೆ ಹಣ ವರ್ಗಾವಣೆ ಅಗಿರುತ್ತದೆ.

ವಿಧಾನ-2: ಕ್ಷೀರಸಿರಿ ಜಾಲತಾಣದ ಮೂಲಕ ಚೆಕ್ ಮಾಡಬವುದು.

ರೈತರಿಗೆ ಪ್ರತಿ ತಿಂಗಳ ಹಾಲಿನ ಪ್ರೋತ್ಸಾಹ ಧನ ವಿತರಣೆ ಮಾಡಲು ಕ್ಷೀರಸಿರಿ ಜಾಲತಾಣವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ರೈತರು ಈ ವೆಬ್ಸೈಟ್ ಭೇಟಿ ಮಾಡಿ ನಿಮ್ಮ FID ನಂಬರ್ ಹಾಕಿ ಎಷ್ಟು ಲೀಟರ್ ಹಾಲಿಗೆ ಎಷ್ಟು ಸಹಾಯಧನ ವರ್ಗಾವಣೆ ಅಗಿದೆ ಎಂದು ತಿಂಗಳುವಾರು ಮಾಹಿತಿ ಗೋಚರಿಸುತ್ತದೆ.

Step-1: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://ksheerasiri.karnataka.gov.in/KMF_Milk ಕ್ಷೀರಸಿರಿ ವೆಬ್ಸೈಟ್ ಭೇಟಿ  ಮಾಡಬೇಕು ನಂತರ ಫಲಾನುಭವಿಯ FID ನಂಬರ್ ಹಾಕಿ Login ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ನಂತರ ವರ್ಷ ಆಯ್ಕೆ ಮಾಡಿ "View" ಬಟನ್ ಮೇಲೆ ಕ್ಲಿಕ್ ಮಾಡಿದ್ದರೆ ನೀವು ಡೈರಿಗೆ ಪೂರೈಕೆ ಮಾಡಿದ ತಿಂಗಳುವಾರು ಹಾಲಿನ ವಿವರ ಮತ್ತು ಸಹಾಯಧನದ ಹಣ ವರ್ಗಾವಣೆ ಮಾಹಿತಿ ತೋರಿಸುತ್ತದೆ.

ಡೈರಿಗಳಿಗೆ ಹಾಲು ಪೂರೈಕೆ ಮಾಡಿದ ಬಳಿಕವು ನಿಮಗೆ ಹಾಲಿನ ಪ್ರೋತ್ಸಾಧನ ವರ್ಗಾವಣೆ ಅಗಿಲ್ಲದಿದ್ದರೆ ಇಲ್ಲಿ ಕಿಕ್ ಮಾಡಿ ಒಕ್ಕೂಟವಾರು ಲಭ್ಯವಿರುವ ಸಹಾಯವಾಣಿ ಸಂಖ್ಯೆಗನ್ನು ಪಡೆದು ಹೆಚ್ಚಿನ ಮಾಹಿತಿಯನ್ನು ಪಡೆಯಬವುದು.

ಕೃಷಿಕರಿಗೆ ಸಂಬಧಿಸಿದ ಇತರೆ ಯೋಜನೆಗಳ ಅಂಕಣಗಳು:

Crop insurance status: ಬೆಳೆ ವಿಮೆ ಕುರಿತು ಈ ರೀತಿ ನಿಮ್ಮ ಮೊಬೈಲ್ ಗೆ ಮೆಸೇಜ್ ಬಂದಿದೆಯೇ? ಹಾಗಾದರೆ ಇದಕ್ಕೆ ಪರಿಹಾರವೇನು?

FID Number: ರೈತರು ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ!

Crop survey details- ಕೃಷಿ ಇಲಾಖೆಯಿಂದ ಸರ್ವೆ ನಂಬರ್ ವಾರು ಬೆಳೆ ಸಮೀಕ್ಷೆ ವಿವರ ಬಿಡುಗಡೆ! ನಿಮ್ಮ ಜಮೀನಿನ ಬೆಳೆ ವಿವರ ಚೆಕ್ ಮಾಡಿ.

ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ!

ನಿಮ್ಮ ಹಳ್ಳಿಯಲ್ಲಿ ಯಾವ ಸರ್ವೆ ನಂಬರ್ ಎಲ್ಲಿ ಬರುತ್ತದೆ ಎಂದು ಹೇಗೆ ತಿಳಿಯುವುದು?

ಮೀನುಗಾರಿಕೆ ಇಲಾಖೆಯಿಂದ ಶೇ. 40% ಮತ್ತು ಶೇ. 60% ರಷ್ಟು ಸಹಾಯಧನ ಯೋಜನೆಗಳಿಗೆ ಅರ್ಜಿ ಅಹ್ವಾನ.

Sheep Farming schemes: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆಯಬವುದು?

 Nrega scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು

Chaff cutter subsidy: ಶೇ 50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: