Home Blog

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ(Crop insurance rejected Farmers list) 2023-24 ನೇ ಸಾಲಿನಲ್ಲಿ ತಮ್ಮ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಿದ ಕೆಲವು ರೈತರ ಅರ್ಜಿಗಳು ತಾಂತ್ರಿಕ ಕಾರಣದಿಂದ ತಿರಸ್ಕೃತಗೊಂಡಿದ್ದು ಈ ಕುರಿತು ರೈತರು ಆಕ್ಷೇಪಣೆಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ.

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ(Crop Insurance Scheme) ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಒದಗಿಸಲಾಗುತ್ತದೆ ಈ ನಿಟ್ಟಿನಲ್ಲಿ ಕಳೆದ ವರ್ಷ ಈ ಯೋಜನೆಯಡಿ ಪ್ರೀಮಿಯಂ ಮೊತ್ತವನ್ನು ಪಾವತಿ ಮಾಡಿ ವಿಮೆಯನ್ನು ಮಾಡಿಸಿ ಕೆಲವು ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡ ರೈತರ ಅರ್ಜಿ ವಿವರವನ್ನು ಕೃಷಿ ಇಲಾಖೆಯ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಕಟಿಸಲಾಗಿದೆ.

ಬೆಳೆ ವಿಮೆ(Bele Vime Status) ತಿರಸ್ಕೃತಗೊಂಡ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ? ಈ ಪಟ್ಟಿಯಲ್ಲಿ ಹೆಸರಿದ್ದರೆ ಯಾವ ಕ್ರಮವನ್ನು ಅನುಸರಿಸಬೇಕು? ಆಕ್ಷೇಪಣೆಯನ್ನು ಸಲ್ಲಿಸಲು ಒದಗಿಸಬೇಕಾದ ಕ್ರಮಗಳೇನು? ಬೆಳೆ ವಿಮೆ ಅರ್ಜಿಗಳು ತಿರಸ್ಕೃತಗೊಳ್ಳಲು ಕಾರಣವೇನು? ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: Post office recruitment-ಅಂಚೆ ಇಲಾಖೆಯಲ್ಲಿ ಬರೋಬ್ಬರಿ 21,413 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ!

Crop insurance rejected Farmers list-2025-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ:

ಬೆಳೆ ವಿಮೆಯನ್ನು ಮಾಡಿಸಲು ಪ್ರೀಮಿಯಂ ಮೊತ್ತವನ್ನು ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಿ ಕೆಲವು ತಾಂತ್ರಿಕ ಕಾರಣಗಳಿಂದ ನಿಮ್ಮ ಅರ್ಜಿ ತಿರಸ್ಕೃತ ಅಗಿರುವುದನ್ನು ಚೆಕ್ ಮಾಡಿಕೊಳ್ಳಲು ಅಥವಾ ತಿರಸ್ಕೃತ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಎಂದು ಚೆಕ್ ಮಾಡಿಕೊಳ್ಳಲು ರೈತರು ನಿಮ್ಮ ಹೋಬಳಿಯ ಕೃಷಿ ಇಲಾಖೆಯಡಿ ಕಾರ್ಯನಿರ್ವಹಿಸುವ ರೈತ ಸಂಪರ್ಕ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿಕೊಳ್ಳಬಹುದು.

How to Check Rejected Crop insurance Farmers list-ನಿಮ್ಮ ಮೊಬೈಲ್ ನಲ್ಲೇ ತಿರಸ್ಕೃತಗೊಂಡ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಚೆಕ್ ಮಾಡಿಕೊಳ್ಳವ ವಿಧಾನ:

ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಯೋಜನೆಯ ಅರ್ಜಿಯ ವಿಲೇವಾರಿಯನ್ನು ಮಾಡಲು ರಾಜ್ಯ ಸರಕಾರದಿಂದ ಅಭಿವೃದ್ದಿಪಡಿಸಿರುವ samrakshane.gov.in ಪೋರ್ಟಲ್ ಅನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿರಸ್ಕೃತಗೊಂಡ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: Uchitha Holige Tarabeti-ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ!

Crop Insurance

Step-1: ಮೊದಲಿಗೆ ಈ Crop insurance rejected list ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸಂರಕ್ಷಣೆ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ “ವರ್ಷದ ಆಯ್ಕೆ / Select Insurance Year” ಆಯ್ಕೆಯಲ್ಲಿ “2023-24” ಎಂದು ಆಯ್ಕೆ ಮಾಡಿಕೊಂಡು “ಋತು ಆಯ್ಕೆ / Select Insurance Season” ಆಯ್ಕೆಯಲ್ಲಿ Kharif/Rabi ಎಂದು ಆಯ್ಕೆ ಮಾಡಿಕೊಂಡು “ಮುಂದೆ/Go” ಬಟನ್ ಮೇಲೆ ಕ್ಲಿಕ್ ಮಾಡಿ ಮಾಡಬೇಕು.

Step-3: ಈ ಪೇಜ್ ನಲ್ಲಿ ಕೆಳಗೆ “Farmers” ಕಾಲಂ ನಲ್ಲಿ “Check status” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರ ರೈತರ ಆಧಾರ್ ಕಾರ್ಡ/ಮೊಬೈಲ್ ನಂಬರ್ ಹಾಕಿ “Captcha” ಕೋಡ್ ಅನ್ನು ನಮೂದಿಸಿ Search ಬಟನ್ ಮೇಲೆ ಕ್ಲಿಕ್ ಮಾಡಿದಾದ ಈ ಕೆಳಗಿನ ಚಿತ್ರದಲ್ಲಿ ತೋರಿಸಿದ ಹಾಗೇ ನಿಮ್ಮ ಅರ್ಜಿಯ ಸ್ಥಿತಿಯು “ವಿಮಾ ಕಂಪನಿಯಿಂದ ಅರ್ಜಿ ಸ್ವೀಕೃತಿಯಾಗಿದೆ/Application Acknowledge by Insurance Co” ಈ ರೀತಿ ತೋರಿಸಿದರೆ ನಿಮ್ಮ ಅರ್ಜಿ ಸರಿಯಾಗಿದೆ ಎಂದು ಅರ್ಥ ಒಂದೊಮ್ಮೆ “ನಿಮ್ಮ ಅರ್ಜಿ ತಿರಸ್ಕೃತಗೊಂಡಿದೆ ಕೃಷಿ ಇಲಾಖೆಯನ್ನು ಸಂಪರ್ಕಿಸಿ” ಎಂದು ತೋರಿಸಿದರೆ ಕೃಷಿ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ.

Bele vime arji

ಇದನ್ನೂ ಓದಿ: Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

Bele vime-ರೈತರಿಗೆ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ:

ಒಂದೊಮ್ಮೆ ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಅರ್ಜಿಯನ್ನು ಸರಿಪಡಿಸಿಕೊಳ್ಳಲು ಕೃಷಿ ಇಲಾಖೆಯಿಂದ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಆಕ್ಷೇಪಣೆಯನ್ನು ಸಲ್ಲಿಸಲು ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Reason For Crop insurance Application Rejection-ಬೆಳೆ ವಿಮೆ ಅರ್ಜಿಗಳು ತಿರಸ್ಕೃತಗೊಳ್ಳಲು ಪ್ರಮುಖ ಕಾರಣಗಳು:

ಬೆಳೆ ವಿಮೆ ಅರ್ಜಿಯ ಬೆಳೆ ಮಾಹಿತಿಯು ನಿಮ್ಮ ಜಮೀನಿನ ಬೆಳೆ ಸಮೀಕ್ಷೆಗೆ ತಾಳೆಯಾಗದೇ ಇದ್ದಲ್ಲಿ ಬೆಳೆ ವಿಮೆ ಅರ್ಜಿಗಳು ತಿರಸ್ಕೃತಗೊಳ್ಳಲುತ್ತವೆ.

ಬೆಳೆ ವಿಮೆ ಅರ್ಜಿಯ ಹೆಸರು ಮತ್ತು ಅರ್ಜಿದಾರರ ಆಧಾರ್ ಕಾರ್ಡ ಹೆಸರು ತಾಳೆಯಾಗದೇ ಇದ್ದಲ್ಲಿ ಅರ್ಜಿಗಳು ತಿರಸ್ಕೃತಗೊಳ್ಳಲುತ್ತವೆ.

ಜಮೀನಿನ ಪಹಣಿ ಮಾಲೀಕರ ಹೆಸರು ಮತ್ತು ಅರ್ಜಿದಾರರ ಹೆಸರು ತಾಳೆಯಾಗದೇ ಇದ್ದಲ್ಲಿ ಅರ್ಜಿಗಳು ತಿರಸ್ಕೃತಗೊಳ್ಳಲುತ್ತವೆ.

Post office recruitment-ಅಂಚೆ ಇಲಾಖೆಯಲ್ಲಿ ಬರೋಬ್ಬರಿ 21,413 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ!

0

ಭಾರತೀಯ ಅಂಚೆ ಇಲಾಖೆಯಿಂದ ನಿರುದ್ಯೋಗಿ ಯುವಕ/ಯುವತಿಯಿರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಅಂಚೆ ಇಲಾಖೆಯಲ್ಲಿ(Post office recruitment-2025) ಖಾಲಿಯಿರುವ 21,413 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಅಂಚೆ ಇಲಾಖೆಯಿಂದ(Post office recruitment) ಅರ್ಜಿ ಆಹ್ವಾನಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು? ಯಾವೆಲ್ಲ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ದಾಖಲಾತಿಗಳು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ, ನಿಮ್ಮ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಮಾಹಿತಿಯನ್ನು ಪಡೆಯುವ ವಿಧಾನ, ಸೇರಿದಂತೆ ಎಲ್ಲಾ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Uchitha Holige Tarabeti-ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ!

Eligibility for gramin dak sevak-ಅರ್ಜಿ ಸಲ್ಲಿಸಲು ಅರ್ಹತೆಗಳು:

1) ಅರ್ಜಿದಾರರು ಭಾರತೀಯ ನಿವಾಸಿಯಾಗಿರಬೇಕು.
2) ಅರ್ಜಿದಾರರು 10ನೇ ತರಗತಿಯನ್ನು ಪಾಸಾಗಿರಬೇಕು.
3) ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
4) ಅರ್ಜಿದಾರರು ದ್ವಿಚಕ್ರ ವಾಹನವನ್ನು ಓಡಿಸುವ ಸಾಮರ್ಥ್ಯ ಹೊಂದಿರಬೇಕು.
5) ಅರ್ಜಿದಾರರ ವಯಸ್ಸು 18 ರಿಂದ 40 ವರ್ಷದ ಒಳಗಿರಬೇಕು.

Post office recruitment Details-ಯಾವೆಲ್ಲ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ?

ಶಾಖಾ ಪೋಸ್ಟ್ ಮಾಸ್ಟರ್(Branch Postmaster), ಸಹಾಯಕ ಶಾಖಾ ಪೋಸ್ಟ್ ಮಾಸ್ಟರ್(Assistant Branch Postmaster) ಮತ್ತು ಡಾಕ್ ಸೇವಕ(Dak Sevaks) ಈ ಮೂರು ಹುದ್ದೆ ಸೇರಿ ಒಟ್ಟು 21,413 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

indian post jobs

ಇದನ್ನೂ ಓದಿ: Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Application Dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ- 10 ಫೆಬ್ರವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 03 ಮಾರ್ಚ್ 2025

Documents For Application-ಅರ್ಜಿ ಸಲ್ಲಿಸಲು ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) SSLC ಅಂಕಪಟ್ಟಿ
3) ಪೋಟೋ
4) ಮೊಬೈಲ್ ನಂಬರ್

ಇದನ್ನೂ ಓದಿ: Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

Post Office Recruitment Online Application Link- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅಧಿಕೃತ ಅಂಚೆ ಇಲಾಖೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1:Apply Now ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಪೋಸ್ಟ್ ಅಪೀಸ್ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

indian post

ಇದನ್ನೂ ಓದಿ: Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

Step-2: ತದನಂತರ ಈ ಪುಟದ ಮೇಲೆ ಕಾಣಿಸುವ “Stage 1.Registration” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ ಇತರೆ ವಿವರವನ್ನು ಭರ್ತಿ ಮಾಡಿ ಅರ್ಜಿಯನ್ನು ಹಾಕಲು ನೋಂದಣಿಯನ್ನು ಮಾಡಿಕೊಳ್ಳಬೇಕು.

Step-3: ನಂತರ ಮುಖಪುಟ ಭೇಟಿ ಮಾಡಿ “Stage 2.Apply Online” ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿ “Apply” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ Registration Number ಮತ್ತು Circle Applying for ಈ ಎರಡು ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಂಡು “Submit” ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ವಿವರವನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

District Wise Vacancy Details-ನಿಮ್ಮ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಮಾಹಿತಿಯನ್ನು ಪಡೆಯುವ ವಿಧಾನ:

Step-1: ಮೊದಲಿಗೆ CLICK HERE ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಂಚೆ ಇಲಾಖೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಒಟ್ಟು 23 ರಾಜ್ಯಗಳ ಹೆಸರುಗಳು ಗೋಚರಿಸುತ್ತವೆ ಇಲ್ಲಿ “Karnataka” ರಾಜ್ಯದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ಜಿಲ್ಲೆಗಳ ಹೆಸರುಗಳು ಕಾಣಿಸುತ್ತವೆ ಇಲ್ಲಿ ಜಿಲ್ಲೆಗಳ ಪಟ್ಟಿ ತೋರಿಸುತ್ತದೆ ಕೆಳಗೆ Select Division ಆಯ್ಕೆಯ ಮೇಲೆ ಕ್ಲಿಕ್ ಮಾಡಿ Division ಆಯ್ಕೆ ಮಾಡಿಕೊಂಡು “View Post” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಮಾಹಿತಿಯನ್ನು ನೋಡಬಹುದು.

Post office recruitment notification-ಅಂಚೆ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ- Download Now
Post office Vacancy Details-ಖಾಲಿ ಹುದ್ದೆಗಳ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ- Download Now

Uchitha Holige Tarabeti-ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ!

0

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ 1 ತಿಂಗಳ ಉಚಿತ ಟೈಲರಿಂಗ್(Sewing Machine Training) ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ವಿವರಣೆಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಇತೀಚಿನ ದಿನಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಹೊಲಿಗೆ ಯಂತ್ರ(Holige yantra) ತರಬೇತಿ ಪಡೆದು ಸ್ವಾವಲಂಬನೆ ಜೀವನವನ್ನು ನಡೆಸಲು ಹೆಚ್ಚು ಉತ್ಸಾಹಕರಾಗಿದ್ದು ಈ ನಿಟ್ಟಿನಲ್ಲಿ ಆಸಕ್ತ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ ಉಚಿತವಾಗಿ ಹೊಲಿಗೆ ಯಂತ್ರ ತರಬೇತಿಯನ್ನು(Holige Yantra Tarabeti) ನೀಡುವುದರ ಜೊತೆಗೆ ತರಬೇತಿಯನ್ನು ಪಡೆದ ಬಳಿಕ ಸ್ವ-ಉದ್ಯೋಗವನ್ನು ಆರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಪಡೆಯುವುದರ ಕುರಿತು ಸಹ ಮಾರ್ಗದರ್ಶನ ನೀಡಲಾಗುತ್ತದೆ.

ಇದನ್ನೂ ಓದಿ: Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

Who can apply For sewing machine Training-ಉಚಿತ ಹೊಲಿಗೆ ತರಬೇತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹತೆಗಳು:

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಈ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಅರ್ಜಿದಾರ ಮಹಿಳೆಗೆ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು. 

ಅಭ್ಯರ್ಥಿಗೆ ಕನ್ನಡವನ್ನು ಓದಲು ಹಾಗೂ ಬರೆಯಲು ಬರಬೇಕು ಅಂತವರಿಗೆ ಮಾತ್ರ ಅವಕಾಶವಿರುತ್ತದೆ. 

ಇದನ್ನೂ ಓದಿ: Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

sewing machine training

ಅರ್ಜಿದಾರರು ಒಮ್ಮೆ ತರಬೇತಿ ಕೇಂದ್ರದಿಂದ ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

BPL ಪಡಿತರ ಚೀತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ಕೇಂದ್ರದ ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Sewing machine Training dates-ತರಬೇತಿ ನಡೆಯುವ ಅವದಿ:

ಉಚಿತ ಹೊಲಿಗೆ ಯಂತ್ರ ತರಬೇತಿಯು ದಿನಾಂಕ- 05 ಮಾರ್ಚ್ 2025 ರಿಂದ ಆರಂಭವಾಗಿ 03 ಏಪ್ರಿಲ್ 2025 ಕ್ಕೆ ಮುಕ್ತಾಯವಾಗುತ್ತದೆ ಒಟ್ಟು 30 ದಿನಗಳ ತರಬೇತಿಯು ಇದಾಗಿರುತ್ತದೆ.

ಇದನ್ನೂ ಓದಿ: Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

Required Documents For sewing machine Training-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳು:

1) ಅರ್ಜಿದಾರ ಮಹಿಳೆಯ ಆಧಾರ್ ಕಾರ್ಡ ಪ್ರತಿ
2) ಪೋಟೋ
3) ಪಡಿತರ ಚೀಟಿ ಪ್ರತಿ
4) ಬ್ಯಾಂಕ್ ಪಾಸ್ ಬುಕ್ ಪ್ರತಿ
5) ಪಾನ್ ಕಾರ್ಡ
6) ಮೊಬೈಲ್ ನಂಬರ್

Free sewing machine Training-ಈ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ:

ಈ ತರಬೇತಿಯು ಒಟ್ಟು 30 ದಿನ ಆಯೋಜನೆ ಮಾಡಲಾಗಿದ್ದು ತರಬೇತಿ ಕೇಂದ್ರದಿಂದ ತರಬೇತಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

How To Apply-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಈ 9449860007, 9538281989, 9916783825, 8880444612 ಮೊಬೈಲ್ ನಂಬರ್ ಗಳಿಗೆ ಕರೆ ಮಾಡಿ ನಿಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ತರಬೇತಿ ಆರಂಭವಾಗುವ ದಿನದಂದು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ತರಬೇತಿಯಲ್ಲಿ ಭಾಗವಹಿಸಬೇಕು.

Training Center Address -ತರಬೇತಿ ನಡೆಯುವ ಸ್ಥಳ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ
ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ

ಇದನ್ನೂ ಓದಿ: Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

Free sewing machine subsidy Yojana-ಹೊಲಿಗೆ ಯಂತ್ರಕ್ಕೆ ಸಹಾಯಧನ ಪಡೆಯಬಹುದು ಹೇಗೆ?

ನಮ್ಮ ರಾಜ್ಯದಲ್ಲಿ ಸಾರ್ವಜನಿಕರು ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು ಪಡೆಯಲು ಎರಡು ಯೋಜನೆಯಡಿ ಅವಕಾಶವಿರುತ್ತದೆ, ಒಂದನೇಯದು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM vishwakarma ) ಎರಡನೇಯದು ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದಲು ಸಹ ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು ಪಡೆಯಬಹುದಾಗಿದೆ.

PM vishwakarma-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ- Read More

Free sewing machine-ಗ್ರಾಮೀಣ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ- Read More

Microfinance-ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್ ಕುರಿತು ಸುಗ್ರೀವಾಜ್ಞೆ!

0

ರಾಜ್ಯ ಸರಕಾರದಿಂದ ಮೈಕ್ರೋ ಫೈನಾನ್ಸ್(Microfinance) ಹಾವಳಿಗೆ ಅಂಕುಶ ಹಾಕಲು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ ಎನ್ನುವ ನೂತನ ನಿಯಮವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದು ಈ ಕುರಿತು ಸರಕಾರಿದಿಂದ ಹೊರಡಿಸಿರುವ ಪ್ರಕಟಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

ಕಳೆದ ಎರಡು ತಿಂಗಳಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಗಳ(Microfinance News) ಕಿರುಕುಳಕ್ಕೆ ಬೇಸತ್ತು ಅನೇಕ ಜನರು ಆತ್ಮಹತ್ಯೆಯನ್ನು ಮಾಡಿಕೊಳ್ಳುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಇದನ್ನು ಗಮನಿಸಿದ ರಾಜ್ಯ ಸರಕಾರವು ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ನಿಯಂತ್ರಣವನ್ನು ಹಾಕಲು ನೂತನ ನಿಯಮವನ್ನು ಜಾರಿಗೆ ತರಲಾಗಿದೆ.

ಸಾಲ ವಸೂಲಾತಿ ವೇಳೆ ಮೈಕ್ರೋ ಫೈನಾನ್ಸ್‌ ಕಂಪನಿಗಳು(Microfinance new guidelines) ನಡೆಸುತ್ತಿದ್ದ ದೌರ್ಜನ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಜಾರಿಗೆ ತಂದ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶದ ಮುಖ್ಯಾಂಶಗಳು ಈ ಕೆಳಗಿನಂತಿವೆ.

ಇದನ್ನೂ ಓದಿ: Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Microfinance Latest News-ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು:

ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಜೈಲು ವಾಸದೊಂದಿಗೆ ಅಥವಾ ₹10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಕಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.

ಕರ್ನಾಟಕ ಕಿರು (MICRO) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) 12-02-2025 ರಂದು ಜಾರಿಗೆ ಬಂದಿದೆ.

ಸದರಿ ಅಧ್ಯಾದೇಶವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.

ಇದನ್ನೂ ಓದಿ: Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

finance

ಇದನ್ನೂ ಓದಿ: Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

ಇದು ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎ೦ದು ಆದೇಶಿಸಲಾಗಿದೆ.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋ೦ದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಅಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು? 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ₹40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

Microfinance in karnataka

ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಮಿ ಸಾಲಗಳ ವಿವರೆ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.

ವಿವಾದಗಳನ್ನು ಇತ್ಯರ್ಥ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.

ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ₹5 ಲಕ್ಷಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೆಯ ಅಪರಾಧ/ ಜಾಮೀನು ರಹಿತ (COGNIZABLE/NON BAILABLE) . ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುದಕ್ಕೆ ನಿರಾಕರಿಸುವುದಿಲ್ಲ.

Microfinance new rules

ಪೋಲೀಸ್ ಉಪ ಅಧೀಕ್ಷಕರ (DYSP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (SUO MOTO) ಪ್ರಕರಣವನ್ನು ದಾಖಲಿಸಬಹುದು.

ಸರ್ಕಾರವು ಕಾಲಕಾಲಕ್ಕೆ ಈ ಅಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

ಈ ಅಧ್ಯಾದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

Ration card application-ಷರತ್ತಿನ ಅನ್ವಯ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

0

ಆಹಾರ ಇಲಾಖೆಯಿಂದ ಷರತ್ತಿನ ಅನ್ವಯ ಹೊಸ ರ‍ೇಶನ್ ಕಾರ್ಡ ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ(New Ration card application)ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಭಾರತ ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಯೊಬ್ಬ ನಾಗರಿಕರಿಗೆ ಆಹಾರ ಧ್ಯಾನಗಳನ್ನು ಉಚಿತವಾಗಿ ವಿತರಣೆಯನ್ನು ಮಾಡಲು ಅರ್ಹ ಫಲಾನುಭವಿಗಳನ್ನು ಗುರುತಿಸಿ ಆಹಾರ ಧಾನ್ಯವನ್ನು ವಿತರಣೆ ಮಾಡಲು ಪಡಿತರ ಚೀಟಿಗಳನ್ನು(New Ration card) ವಿತರಣೆ ಮಾಡಲಾಗುತ್ತದೆ ಈ ಪಡಿತರ ಚೀಟಿಗಳನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಜವಾಬ್ದಾರಿಯನ್ನು ವಹಿಸಲಾಗಿರುತ್ತದೆ.

ಪ್ರಸ್ತುತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara ilake) ಕೆಲವು ಷರತ್ತಿನ ಅನ್ವಯ ಹೊಸ ಪಡಿತರ ಚೀಟಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಯಾವೆಲ್ಲೆ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

Medical emergency ration card application-ಮೆಡಿಕಲ್ ಎಮರ್ಜೆನ್ಸಿ ಇದ್ದವರಿಗೆ ಹೊಸ ಪಡಿತರ ಚೀಟಿ ಪಡೆಯಲು ಅವಕಾಶ:

ಹೊಸ ರೇಶನ್ ಕಾರ್ಡ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಎಲ್ಲಾ ನಾಗರಿಕರಿಗೆ ಅವಕಾಶ ನೀಡಿರುವುದಿಲ್ಲ ಕೇವಲ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಮೆಡಿಕಲ್ ಎಮರ್ಜೆನ್ಸಿ ಕಾರಣದಿಂದ ಪಡಿತರ ಚೀಟಿ ಪಡೆಯಲು ಅರ್ಹರಿರುವವರಿಗೆ ಮಾತ್ರ ಅರ್ಜಿ ಸಲ್ಲಿಸಲು ಇಲಾಖೆಯಿಂದ ಅವಕಾಶ ನೀಡಲಾಗಿರುತ್ತದೆ.

ಮೆಡಿಕಲ್ ಎಮರ್ಜೆನ್ಸಿ ಹೊರತುಪಡಿಸಿ ಇತರರಿಗಿಲ್ಲ ಅವಕಾಶ:

ಇಲಾಖೆಯ ಪ್ರಕಟಣೆಯನ್ವಯ ಕೇವಲ ಮೆಡಿಕಲ್ ಎಮರ್ಜೆನ್ಸಿ ಹೊಂದಿರುವ ನಾಗರಿಕರಿಗೆ/ಸಾರ್ವಜನಿಕರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಕೆಲವು ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯಡಿಯಲ್ಲಿ ಆಸ್ಪತ್ರೆ ವೆಚ್ಚದಲ್ಲಿ ರಿಯಾಯಿತಿಯನ್ನು/ಉಚಿತವಾಗಿ ಆರೋಗ್ಯ ಸೇವೆಯನ್ನು ಪಡೆಯಲು ಪಡಿತರ ಚೀಟಿ ಅವಶ್ಯವಿರುತ್ತದೆ ಆದ್ದರಿಂದ ಈ ವರ್ಗದ ನಾಗರಿಕರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

ಇದನ್ನೂ ಓದಿ: Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

ration card

ಇದನ್ನೂ ಓದಿ: Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

Karnataka Food Deparment-ಮೆಡಿಕಲ್ ಎಮರ್ಜೆನ್ಸಿ ಮಾತ್ರ ಏಕೆ ಅವಕಾಸ ನೀಡಲಾಗಿರುತ್ತದೆ?

ರಾಜ್ಯ ಸರಕಾರಕ್ಕೆ ಆನೇಕ ಜನರು ಆರೋಗ್ಯ ಸೇವೆಯನ್ನು ಪಡೆಯಲು ಪಡಿತರ ಚೀಟಿ ಅವಶ್ಯಕತೆ ಇರುತ್ತದೆ ಎಂದು ಮನವಿಯನ್ನು ಸಲ್ಲಿಸಿದರ ಪರಿಣಾಮದಿಂದ ಆಹಾರ ಇಲಾಖೆಯಿಂದ ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಮೆಡಿಕಲ್ ಎಮರ್ಜೆನ್ಸಿ ಇದ್ದ ಅರ್ಜಿದಾರರಿಗೆ ಮಾತ್ರ ಹೊಸ ಪಡಿತರ ಚೀಟಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

Medical emergency ration card-ಮೆಡಿಕಲ್ ಎಮರ್ಜೆನ್ಸಿ ಎಂದರೆ ಯಾವೆಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ?

ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು/ವಿವಿಧ ಬಗ್ಗೆಯ ಆಪರೇಶನ್ ಗಳಿಗೆ ಉಚಿತವಾಗಿ/ರಿಯಾಯಿತಿ ದರದಲ್ಲಿ ಚಿಕಿತ್ಸೆಯನ್ನು ಪಡೆಯಲು ರೇಶನ್ ಕಾರ್ಡ ಅವಶ್ಯಕತೆ ಇರುವವರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

How To Apply For New Ration card-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ಕಚೇರಿ ಸಮಯದಲ್ಲಿ ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Required Documents For New Ration card-ಅರ್ಜಿ ಸಲ್ಲಿಸಲು ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3) ಕುಟುಂಬ ಸದಸ್ಯರ ಆಧಾರ್ ಕಾರ್ಡ ಪ್ರತಿ
4) ಪೋಟೋ
5) ಮೊಬೈಲ್ ನಂಬರ್

Online Ration card Status-ಅರ್ಜಿಯನ್ನು ಸಲ್ಲಿಸಿದ ಬಳಿಕ ನಿಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂದು ತಿಳಿಯುವ ವಿಧಾನ:

ಅರ್ಜಿದಾರರು ಒಮ್ಮೆ ಅರ್ಜಿ ಸಲ್ಲಿಸಿದ ಬಳಿಕ New Ration card Application ಇಲ್ಲಿ ಕ್ಲಿಕ್ ಮಾಡಿ ಆಹಾರ ಇಲಾಖೆಯ ಅಧಿಕೃತ ತಂತ್ರಾಂಶವನ್ನು ನಿಮ್ಮ ಮೊಬೈಲ್ ಮೂಲಕ ಪ್ರವೇಶ ಮಾಡಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ಮನೆಯಲ್ಲೇ ಕುಳಿತು ನೀವು ಆನ್ಲೈನ್ ಮೂಲಕ ಹೊಸ ರೇಶನ್ ಕಾರ್ಡ ಪಡೆಯಲು ಸಲ್ಲಿಸಿದ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಯಬಹುದಾಗಿದೆ.

Cibil Score-ಬ್ಯಾಂಕ್ ನಲ್ಲಿ ಸಾಲ ಪಡೆಯಲು ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳುವುದು ಹೇಗೆ?

0

ಯಾವುದೇ ಬ್ಯಾಂಕ್ ಮೂಲಕ ನಾಗರಿಕರು ಸಾಲವನ್ನು(Loan) ಪಡೆಯಲು ಅತೀ ಮುಖ್ಯವಾಗಿ ಬೇಕಿರುವ ಸಿಬಿಲ್ ಸ್ಕೋರ್(Cibil score), ಏನಿದು ಸಿಬಿಲ್ ಸ್ಕೋರ್? ಸಿಬಿಲ್ ಸ್ಕೋರ್ ಎಷ್ಟು ಇದ್ದರೆ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಬಹುದು? ಸಿಬಿಲ್ ಸ್ಕೋರ್ ಅನ್ನು ಹೆಚ್ಚಿಸಿಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಇತ್ಯಾದಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.

Simple tips to Increase Cibil Score-ಈಗಿನ ದಿನದಲ್ಲಿ ಯಾವುದೇ ಬ್ಯಾಂಕಿನಲ್ಲಿ ಅಥವಾ ಫೈನಾನ್ಸ್ ಗಳಲ್ಲಿ ವೈಯಕ್ತಿಕ ಸಾಲ, ಗೃಹ ಸಾಲ ಸೇರಿದಂತೆ ಹಲವು ರೀತಿಯ ಲೋನ್ ಗಳನ್ನು ಪಡೆಯಬೇಕೆಂದರೆ ನಿಮ್ಮ ಸಿಬಿಲ್ ಸ್ಕೋರ್ ಅತೀ ಪ್ರಮುಖ ಪಾತ್ರ ವಹಿಸುತ್ತದೆ.

ನಮ್ಮ ಹಳೆಯ ಸಾಲದ ಮರುಪಾವತಿಯನ್ನು ನಾವು ಸರಿಯಾಗಿ ಮಾಡದೆ ಇದ್ದಲ್ಲಿ ಸರ್ವೇ ಸಾಮಾನ್ಯವಾಗಿ ನಮ್ಮ ಸಿಬಿಲ್ ಸ್ಕೋರ್ ಕಡಿಮೆಯಾಗುತ್ತದೆ. ಸಾಲ ಎಂದರೆ ಕೇವಲ ವೈಯಕ್ತಿಕ ಸಾಲ, ಗೃಹ ಸಾಲಕ್ಕಾಗಿ ನಗದು ರೂಪದಲ್ಲಿ ಪಡೆಯುವುದು ಅಲ್ಲ. ಬದಲಾಗಿ ನೀವು ಯಾವುದೇ ಹೊಸ ವಾಹನ ಖರೀದಿಸಲು, ಹೊಸ ಮೊಬೈಲ್ ತೆಗೆದುಕೊಳ್ಳಲು ನೀವು EMI ಆಯ್ಕೆ ಬಳಸಲು ಬಯಸಿದಲ್ಲಿಯೂ ಕೂಡ ನಿಮ್ಮ ಸಿಬಿಲ್ ಸ್ಕೋರ್ ಪ್ರಮುಖ ಪಾತ್ರ ವಹಿಸುತ್ತದೆ.

ಇದನ್ನೂ ಓದಿ: Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

ಈಗಾಗಲೇ ನಿಮ್ಮ ಸಿಬಿಲ್ ಸ್ಕೋರ್ ಕಡಿಮೆಯಾಗಿದ್ದಲ್ಲಿ ಅದನ್ನು ಹೆಚ್ಚಿಸಿಕೊಳ್ಳಲು ಅನುಸರಿಸಬೇಕಾದ ಸರಳ ವಿಧಾನಗಳು(How to increase cibil score) ಯಾವುವು? ನಿಮ್ಮ ಸಿಬಿಲ್ ಸ್ಕೋರ್ ಎಷ್ಟು ಇದ್ದರೆ ಉತ್ತಮ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

What is cibil score-ಸಿಬಿಲ್ ಸ್ಕೋರ್ ಎಂದರೇನು?

ಯಾವುದೇ ವ್ಯಕ್ತಿ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಬ್ಯಾಂಕ್ ಶಾಖೆಯನ್ನು ಭೇಟಿ ಮಾಡಿದಾಗ ಆ ವ್ಯಕ್ತಿಗೆ ಸಾಲವನ್ನು ನೀಡಬೇಕೇ? ಇಲ್ಲವೇ? ಎಂದು ನಿರ್ಧರಿಸಲು ಈ ಸಿಬಿಲ್ ಸ್ಕೋರ್ ಅಂಕಿ-ಅಂಶವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಈ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ ಮಾತ್ರ ಬ್ಯಾಂಕ್ ಮೂಲಕ ಸಾಲವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

Cibil Score

ಇದನ್ನೂ ಓದಿ: Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

What is the best cibil score-ಸಿಬಿಲ್ ಸ್ಕೋರ್ ಎಷ್ಟು ಇದ್ದರೆ ಉತ್ತಮ?

ಸಿಬಿಲ್ ಸ್ಕೋರ್ ಎಂಬುದು 300 ರಿಂದ 900 ರವರೆಗೆ ಇರುತ್ತದೆ. ನಿಮ್ಮ ಹಣಕಾಸು ವ್ಯವಹಾರದ ಮೇಲೆ ನಿಮ್ಮ ಸ್ಕೋರ್ ಡಿಸೈಡ್ ಆಗುತ್ತದೆ.

ಒಂದು ವೇಳೆ ನಿಮ್ಮ ಸಿಬಿಲ್ ಸ್ಕೋರ್ 750ಕ್ಕಿಂತ ಹೆಚ್ಚಿದ್ದರೆ ಅದನ್ನು ಅತ್ಯುತ್ತಮ ಸ್ಕೋರ್ ಎಂದು ಪರಿಗಣಿಸಲಾಗುತ್ತದೆ.

650 ರಿಂದ 749 ನಡುವಿನ ಸ್ಕೋರ್ ನಿಮ್ಮದಾಗಿದ್ದರೆ ಅದನ್ನು ಉತ್ತಮ ಎಂದು ಪರಿಗಣಿಸಲಾಗುತ್ತದೆ.

500 ರಿಂದ 649 ಅಂತರ ಸ್ಕೋರ್ ನಿಮ್ಮದಾಗಿದ್ದರೆ ಅದನ್ನು ಸರಾಸರಿ ಎಂದು ಪರಿಗಣಿಸಲಾಗುತ್ತದೆ.

ಅದೇ ಒಂದು ವೇಳೆ 499ಕ್ಕಿಂತ ಕಡಿಮೆ ಇದ್ದರೆ ಅದನ್ನು ಕಳಪೆ ಎಂದು ಪರಿಗಣಿಸಲಾಗುವುದು.

ಇದನ್ನೂ ಓದಿ: Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

How to increase cibil score-ಈಗಾಗಲೇ ನಿಮ್ಮ ಸಿಬಿಲ್ ಸ್ಕೋರ್ ಬಹಳ ಕಡಿಮೆ ಇದ್ದರೆ ಅದನ್ನು ಹೆಚ್ಚಿಸಲು ಈ ಸರಳ ಟಿಪ್ಸ್ ಗಳನ್ನು ಅನುಸರಿಸಿ:

ಸದ್ಯಕ್ಕೆ ನಿಮ್ಮ ಸಾಲದ ಬಾಕಿ ಮೊತ್ತವನ್ನು ಸರಿಯಾದ ಸಮಯಕ್ಕೆ ಪಾವತಿಸಿ. ಅದೇ ರೀತಿ ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್ ಗಳ ಕಂತುಗಳನ್ನು ಸರಿಯಾದ ಸಮಯಕ್ಕೆ ಪಾವತಿಸಿದರೆ ಅದು ಸಿಬಿಲ್ ಸ್ಕೋರ್ ಅನ್ನು ಹೆಚ್ಚಿಸಲು ಸಹಾಯ ಮಾಡುವುದು.

ನಿಮ್ಮ ಕ್ರೆಡಿಟ್ ಕಾರ್ಡ್ ನ ಮಿತಿಯ 30% ಕ್ಕಿಂತಲೂ ಕಡಿಮೆ ಬಳಸುವುದು ಉತ್ತಮ. ನಿಮಗೆ ಅತಿಯಾದ ಹಣದ ಅವಶ್ಯಕತೆ ಇದ್ದರೆ ಮಾತ್ರ ನೀವು ದೊಡ್ಡ ಮೊತ್ತವನ್ನು ಸಾಲ ತೆಗೆದುಕೊಳ್ಳಿ. ಒಮ್ಮೆಲೇ ಮರುಪಾವತಿ ಸಾಧ್ಯವಾಗದಿದ್ದಲ್ಲಿ ಅದನ್ನು ಕಂತಿನಲ್ಲಿ ಪರಿವರ್ತಿಸಿಕೊಳ್ಳಿ. ಪ್ರತಿ ತಿಂಗಳು ಕಂತು ಪಾವತಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಮುಂಚಿತವಾಗಿಯೇ ಹಣ ಮರುಪಾವತಿಸಿ. ಇದರಿಂದ ನಿಮ್ಮ ಸಿಬಿಲ್ ಸ್ಕೋರ್ ಹೆಚ್ಚಿಸಿಕೊಳ್ಳಬಹುದು.

ಕಡಿಮೆ ಮರುಪಾವತಿ ಅವಧಿ ಆಯ್ಕೆ ಮಾಡಿಕೊಳ್ಳುವುದು: ಕೆಲವರು ಕಡಿಮೆ ಸಾಲವನ್ನು ತೆಗೆದುಕೊಂಡು, ಅಧಿಕ ಮರುಪಾವತಿ ಆಯ್ಕೆಯನ್ನು ಮಾಡಿಕೊಳ್ಳುತ್ತಾರೆ. ಇದೆ ಕಾರಣದಿಂದಾಗಿ ನಿಮ್ಮ ಸಿಬಿಲ್ ಸ್ಕೋರ್ ಕಡಿಮೆಯಾಗಬಹುದು. ಆದ್ದರಿಂದ ನಿಮ್ಮ ಸಣ್ಣ ಮೊತ್ತದ ಸಾಲಗಳಿಗಾಗಿ ಕಡಿಮೆ ಅವಧಿಯ ಮರುಪಾವತಿ ಅವಧಿಯನ್ನು ಆಯ್ಕೆ ಮಾಡಿಕೊಳ್ಳಿ.

ಈ ರೀತಿ ಮಾಡುವುದರಿಂದ ನಿಮ್ಮ ಸಿಬಿಲ್ ಸ್ಕೋರ್ ಅನ್ನು ಹೆಚ್ಚಿಸಕೊಳ್ಳಬಹುದು. ಈ ಲೇಖನ ಕೇವಲ ಮಾಹಿತಿ ನೀಡಲು ಆಗಿದ್ದು, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುಂಚೆ ಆರ್ಥಿಕ ತಜ್ಞರ ಸಲಹೆ ತೆಗೆದುಕೊಳ್ಳಿ.

Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

0

ರಾಜ್ಯ ಸರಕಾರದಿಂದ ಕರ್ನಾಟಕದ ಎಲ್ಲಾ ಸ್ಥಳಗಳಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕ ಇಲಾಖೆಯ ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಣಿಯನ್ನು(Shop registration) ಮಾಡಿಕೊಳ್ಳಲು ಇಲಾಖೆಯಿಂದ ಅಧಿಕೃತ ನಿಯಮವನ್ನು ಜಾರಿಗೆ ತರಲಾಗಿದೆ.

ರಾಜ್ಯದ ಎಲ್ಲಾ ಸ್ಥಳಗಳಲ್ಲಿ ಸ್ಥಾಪಿಸಲ್ಪಟ್ಟಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯಡಿ ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಇ-ಕಾರ್ಮಿಕ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಲು ಕಾರ್ಮಿಕ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ರ ಪ್ರಾವಧಾನಗಳ ಕಾರ್ಯವ್ಯಾಪ್ತಿಯನ್ನು ಕರ್ನಾಟಕ ರಾಜ್ಯಾದ್ಯಂತ ವಿಸ್ತರಿಸಿದೆ. ಈ ಅಧಿಸೂಚನೆಯು 2025 ಜನವರಿ 1 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ. ಇದು ಈ ಹಿಂದೆ ಹೊರಡಿಸಲಾದ ಎಲ್ಲಾ ಅಧಿಸೂಚನೆಗಳ ಮುಂದುವರೆದ ಭಾಗವಾಗಿದ್ದು, ಅಧಿನಿಯಮದ ಉಪಬಂಧಗಳು ಈಗಾಗಲೇ ಜಾರಿಗೆ ಬಂದಿರುವ ಸ್ಥಳಗಳನ್ನು ಒಳಗೊಂಡಂತೆ ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ಮೂರು ತಿಂಗಳ ನಂತರದ ದಿನಾಂಕದಿಂದ 2025 ಏಪ್ರಿಲ್ 1 ರಿಂದ ರಾಜ್ಯದ ಎಲ್ಲಾ ಸ್ಥಳಗಳಲ್ಲಿ ಜಾರಿಗೆ ಬರಲಿದೆ.

ಇದನ್ನೂ ಓದಿ: Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು?

ಹಿರಿಯ ಕಾಮಿಕ ನಿರೀಕ್ಷಕರು ಮತ್ತು ಕಾರ್ಮಿಕ ನಿರೀಕ್ಷಕರು ನೋಂದಣಿ ಅಧಿಕಾರಿಗಳಾಗಿರುತ್ತಾರೆ:

ಆನ್‍ಲೈನ್‍ನಲ್ಲಿ ಅರ್ಜಿಯನ್ನು ಜಾಲತಾಣ https://www.ekarmika.karnataka.gov.in/ekarmika/Static/Home.aspx ಮೂಲಕ ಸಲ್ಲಿಸಬಹುದು. ಇಲಾಖೆಯ ಹಿರಿಯ ಕಾಮಿಕ ನಿರೀಕ್ಷಕರು ಮತ್ತು ಕಾರ್ಮಿಕ ನಿರೀಕ್ಷಕರು ನೋಂದಣಿ ಅಧಿಕಾರಿಗಳಾಗಿರುತ್ತಾರೆ.

ಇದನ್ನೂ ಓದಿ: Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

Shop registration Fee-ನೋಂದಣಿಗೆ ನಿಗದಿಪಡಿಸಿದ ಶುಲ್ಕದ ವಿವರ ಹೀಗಿದೆ:

ನೋಂದಣಿ ಮಾಡಲು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಯಾವುದೇ ನೌಕರರು ಇಲ್ಲದಿದ್ದರೆ ಶುಲ್ಕ ರೂ. 405/- ನಿಗದಿಪಡಿಸಲಾಗಿರುತ್ತದೆ.

No. of EmployeesFees (Rs.)
No Employees405/-
1 to 9 Employees810/-
10 to 19 Employees5400/-
20 to 49 Employees13500/-
50 to 99 Employees27000/-
100 to 250 Employees54000/-
251 to 500 Employees67500/-
501 to 1000 Employees94500/-
Above 1000 Employees101250/-

ಇದನ್ನೂ ಓದಿ: Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Documents For Shop registration-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳು:

1) ವಿಳಾಸ ದೃಢೀಕರಣ ಪ್ರಮಾಣ ಪತ್ರ/Address Proof for the Establishment(Rental / agreement / GST / BBMP Khata.

2) ಮಾಲೀಕರ ಗುರುತಿನ ಚೀಟಿ/Aadhar card/ Driving license/Voter Card etc.

3) ಅಂಗಡಿ/ವಾಣಿಜ್ಯ ಸಂಸ್ಥೆಯ ನೋಂದಣಿ ಪ್ರಮಾಣ ಪತ್ರ/Incorporation Certificate /Memorandum of Article (In Case of Private Ltd. Company.

4) ಮಾಲೀಕರ ಪೋಟೋ/Photo

5) ಮೊಬೈಲ್ ನಂಬರ್/Mobile Number

ಇದನ್ನೂ ಓದಿ: PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅರ್ಜಿದಾರರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಕಾರ್ಮಿಕ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ತಮ್ಮ ಮೊಬೈಲ್ ನಲ್ಲೇ ನೋಂದಣಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Step-1: ಮೊದಲಿಗೆ Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

karmika ilake

ಇದನ್ನೂ ಓದಿ: Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Step-2: ಇದಾದ ಬಳಿಕ ಈ ವೆಬ್ಸೈಟ್ ಗೆ ಮೊದಲ ಬಾರಿಗೆ ಭೇಟಿ ಮಾಡುತ್ತಿರುವವರು New User ಪೇಜ್ ನಲ್ಲಿ ಅಧಿಕೃತ ವಿವರವನ್ನು ಭರ್ತಿ ಮಾಡಿ ಲಾಗಿನ್ ಅಗಲು ಬಳಕೆದಾರ ಐಡಿ ಮತ್ತು ಪಾಸ್ವರ್ಡ ಅನ್ನು ರಚನೆ ಮಾಡಿಕೊಳ್ಳಬೇಕು.

Step-3: ಮೇಲಿನ ಹಂತವನ್ನು ಪೂರ್ಣಗೊಳಿಸಿ ಬಳಕೆದಾರ ಐಡಿಯನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಿ ಇಲ್ಲಿ ಕೇಳುವ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಶುಲ್ಕವನ್ನು ಪಾವತಿ ಮಾಡಿ ನಿಮ್ಮ ಅಂಗಡಿ/ಸಂಸ್ಥೆಯನ್ನು ನೋಂದಣಿಯನ್ನು ಮಾಡಿಕೊಳ್ಳಬೇಕು.

For More Information-ನೋಂದಣಿ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ:

Helpline Number-ಸಹಾಯವಾಣಿ-08029753059,
Mail-ಮೇಲ್ ವಿಳಾಸ-ekarmikalabour@gmail.com

Aadhar card-ಆಧಾರ್ ಕಾರ್ಡನಲ್ಲಿ ಪತಿ ಹೆಸರನ್ನು ಸೇರಿಸಲು ಈ ದಾಖಲೆ ಕಡ್ಡಾಯ!

0

ಆಧಾರ್ ಕಾರ್ಡನಲ್ಲಿ ಪೋಷಕರ ಹೆಸರನ್ನು ತೆಗೆದು ಹಾಕಿ ಗಂಡನ ಹೆಸರನ್ನು ಸೇರಿಸಲು ಹೊಸದಾಗಿ ಮದುವೆ ಅದ ದಂಪತಿಗಳು ಅಥವಾ ಇಲ್ಲಿಯವರೆಗೆ ಆಧಾರ್ ಕಾರ್ಡನಲ್ಲಿ(Aadhar card) ಹೆಸರನ್ನು ಸೇರಿಸದವರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರಕಾರದ ಕೆಲವೊಂದು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆಧಾರ್ ಕಾರ್ಡನಲ್ಲಿ(Aadhar Card Details) ದಾಖಲಿಸಿರುವ ವಿವರವು ಸರಿಯಾಗಿ ದಾಖಲಾಗಿರುವುದು ಕಡ್ಡಾಯವಾಗಿರುತ್ತದೆ ಈ ಕಾರಣದಿಂದ ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ ವಿವರವನ್ನು ತಪ್ಪದೇ ಸರಿಯಾಗಿ ದಾಖಲಿಸಿಕೊಳ್ಳಬೇಕು.

ನಮ್ಮ ದೇಶದ ನಾಗರಿಕರು ಅತೀ ಅಗತ್ಯವಾಗಿ ಹೊಂದಿರಬೇಕಾದ ಕೆಲವು ಪ್ರಮುಖ ದಾಖಲೆಗಳಲ್ಲಿ ಆಧಾರ್ ಕಾರ್ಡ ಒಂದು ಬಹು ಮುಖ್ಯ ದಾಖಲೆಯಾಗಿದ್ದು ಈ ದಾಖಲೆಯನ್ನು ಪ್ರತಿಯೊಬ್ಬ ಪ್ರಜೆಯು ಹೊಂದಿರುವುದು ಕಡ್ಡಾಯವಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಈ ಕಾರ್ಡ ಹೊಂದಿರುವುದು ಅತ್ಯಗತ್ಯ.

ಇದನ್ನೂ ಓದಿ: Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

ಬಹುತೇಕ ಜನರಿಗೆ ಆಧಾರ್ ಕಾರ್ಡನಲ್ಲಿ ತನ್ನ ಗಂಡ/ಪತಿ ಹೆಸರನ್ನು ಸೇರಿಸಲು ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿರುತ್ತದೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

UIDAI-ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದಿಂದ ನಿರ್ವಹಣೆ:

ಕೇಂದ್ರ ಸರಕಾರದ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)ದಿಂದ ನಮ್ಮ ದೇಶದ ಪ್ರತಿಯೊಬ್ಬ ಆಧಾರ್ ಕಾರ್ಡದಾರರ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿಸಂಗ್ರಹಣೆ ಮಾಡಿರಲಾಗಿರುತ್ತದೆ ಅರ್ಹ ಅರ್ಜಿದಾರರನ್ನು ಗುರುತಿಸುವಿಕೆ, ಹೊಸ ಆಧಾರ್ ಕಾರ್ಡ ವಿತರಣೆ, ಆಧಾರ್ ಕಾರ್ಡನಲ್ಲಿ ದಾಖಲಿಸಿರುವ ವಿವರದ ತಿದ್ದುಪಡಿ, ಆಧಾರ್ ಕಾರ್ಡದಾರರ ಮಾಹಿತಿಯನ್ನು ಕಾಲ ಕಾಲಕ್ಕೆ ನವೀಕರಣ ಮಾಡುವ ಕಾರ್ಯ ಸೇರಿದಂತೆ ಈ ಕಾರ್ಡ ಕುರಿತು ಸಂಪೂರ್ಣ ನಿರ್ವಹಣೆಯನ್ನು ಈ ಪ್ರಾಧಿಕಾರವು ನಿರ್ವಹಿಸುತ್ತದೆ.

ಇದನ್ನೂ ಓದಿ: Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

aadhar card update

Documents For Aadhar update-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

1) ಗಂಡನ ಆಧಾರ್ ಕಾರ್ಡ ಪ್ರತಿ
2) ಪೋಟೋ
3) ಮದುವೆ ಪ್ರಮಾಣ ಪತ್ರ
4) ಮದುವೆ ಆಮಂತ್ರಣ ಪ್ರತಿ
5) ಮೊಬೈಲ್ ನಂಬರ್

How to Apply-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಪ್ರಥಮದಲ್ಲಿ ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆಧಾರ್ ಕಾರ್ಡ ಸೇವಾ ಕೇಂದ್ರವನ್ನು/ಬ್ಯಾಂಕ್ ಶಾಖೆಯನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಆಧಾರ್ ಕಾರ್ಡ ನಲ್ಲಿ ಉಪನಾಮ ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

Application fee-ಅರ್ಜಿ ಶುಲ್ಕ:

ಆಧಾರ್ ಕಾರ್ಡನಲ್ಲಿ ಉಪನಾಮ ತಿದ್ದುಪಡಿ/ಸೇರಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 50 ರೂ ಶುಲ್ಕವನ್ನು ನಿಗದಿಪಡಿಸಲಾಗಿದೆ.

Time limit-ತಿದ್ದುಪಡಿಗೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ?

ಒಮ್ಮೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿ ವಿಲೇವಾರಿಗೆ 10-15 ದಿನ ಸಮಯ ಅವಶ್ಯಕತೆ ಇರುತ್ತದೆ.

ಇದನ್ನೂ ಓದಿ: Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Online Aadhar update Status check-ಆನ್ಲೈನ್ ಮೂಲಕ ಅರ್ಜಿ ಸ್ಥಿತಿಯನ್ನು ಚೆಕ್ ಮಾಡುವ ವಿಧಾನ:

ಅರ್ಜಿದಾರರ ಒಮ್ಮೆ ಆಧಾರ್ ಸೇವಾ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂದು ಈ ಕೆಳಗಿನ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಮನೆಯಲ್ಲಿ ಇದ್ದು ಚೆಕ್ ಮಾಡಿಕೊಳ್ಳಬಹುದು.

Step-1: ಮೊಟ್ಟ ಮೊದಲಿಗೆ Aadhar update Status ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರಕಾರದ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)ದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿದ ಬಳಿಕ ನಿಮ್ಮ ತಿದ್ದುಪಡಿ ಅರ್ಜಿಯನ್ನು ಸಲ್ಲಿಸಿದ ಬಳಿಕ ನೀಡಿರುವ ಸ್ವೀಕೃತಿ ಪ್ರತಿಯಲ್ಲಿರುವ ಸ್ವೀಕೃತಿ ಸಂಖ್ಯೆ ಮತ್ತು ಸಮಯ/ದಿನಾಂಕವನ್ನು ಹಾಕಿ OTP ಅನ್ನು ನಮೂದಿಸಿ ನಿಮ್ಮ ಅರ್ಜಿಯು ಯಾವ ಹಂತದಲ್ಲಿ ಇದೆ ಎಂದು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

Health insurance-ಕೇಂದ್ರ ಸರಕಾರದಿಂದ ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ!

0

ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ನಾಗರಿಕರಿಗೆ ಅತೀ ಕಡಿಮೆ ವಿಮಾ ಮೊತ್ತವನ್ನು(Health insurance) ಪಾವತಿ ಮಾಡಿ ಆರೋಗ್ಯ ವಿಮೆಯನ್ನು ಹೊಂದಲು ಕೇಂದ್ರ ಸರಕಾರವು ಎರಡು ಪ್ರಮುಖ ವಿಮಾ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಈ ಯೋಜನೆಗಳ ಕುರಿತು ಇಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಪ್ರಸ್ತುತ ದಿನ ಮಾನದಲ್ಲಿ ಪ್ರತಿಯೊಬ್ಬ ನಾಗರಿಕರು ತಪ್ಪದೇ ಆರೋಗ್ಯ ವಿಮೆಯನ್ನು ಮಾಡಿಸಿಕೊಂಡಿರಬೇಕು ಏಕೆಂದರೆ ಅನಿರೀಕ್ಷಿತವಾಗಿ ಬರುವ ಆರೋಗ್ಯ ಸಮಸ್ಯೆಗಳಿಂದ ಅರ್ಥಿಕವಾಗಿ ಸದೃಡವಾಗಿರಲು ಈ ಯೋಜನೆಗಳು ನಮಗೆ ತುಂಬಾ ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ಕೇವಲ ₹456 ರೂ ಗೆ ₹4 ಲಕ್ಷ ವಿಮೆಯನ್ನು ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ(PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(PMSBY) ಮೂಲಕ ಪಡೆಯಬಹುದಾಗಿದೆ.

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ(PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(PMSBY) ಈ ಎರಡು ಯೋಜನೆಯಡಿ ನಾಗರಿಕರು ವಿಮೆಯನ್ನು(Best Health Insurance Scheme) ಮಾಡಿಸಿಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Best Health Insurance Scheme-ಕೇವಲ ₹456 ರೂ ಗೆ ₹4 ಲಕ್ಷ ವಿಮೆ ಪಡೆಯಲು ಅವಕಾಶ:

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ(PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(PMSBY) ಈ ಎರಡು ಯೋಜನೆಯಡಿ ನಾಗರಿಕರು ವಿಮೆಯನ್ನು ಮಾಡಿಸುವುದರ ಮೂಲಕ ಈ ಎರಡು ವಿಮಾ ಯೋಜನೆಗಳನ್ನು ಸೇರಿ ಒಟ್ಟು 4 ಲಕ್ಷ ವಿಮಾ ಮೊತ್ತವನ್ನು ಪಡೆಯಲು ಅವಕಾಶವಿರುತ್ತದೆ.

ಈ ವಿಮೆಗಳನ್ನು ಏಕೆ ಮಾಡಿಸಬೇಕು?

ಬಹುತೇಕ ಜನರಿಗೆ ಈ ಭಾವನೆ ಇದ್ದೆ ಇರುತ್ತದೆ ನಾವು ವಿಮೆಯನ್ನು ಮಾಡಿಸುವುದರಿಂದ ನಮಗೆ ಯಾವುದೇ ಪ್ರಯೋಜನವಿಲ್ಲ ಸುಮ್ಮನೆ ವಿಮಾ ಮೊತ್ತವನ್ನು ಪಾವತಿ ಮಾಡಿ ಹೆಚ್ಚು ವೆಚ್ಚ ವ್ಯರ್ಥವಾಗುತ್ತದೆ ಎಂದು ಅದರೆ ಇದು ತಪ್ಪು ಕಲ್ಪನೆಯಾಗಿದೆ ಏಕೆಂದರೆ ಒಂದು ಕುಟುಂಬದಲ್ಲಿ ದುಡಿಮೆ ಮಾಡುವ ವ್ಯಕ್ತಿಯು ಮರಣ ಹೊಂದಿದ್ದರೆ ಆ ವ್ಯಕ್ತಿಯನ್ನೇ ನಂಬಿಕೊಂಡ ಆ ಕುಟುಂಬದ ಕಥೆ ಏನು? ಅವರು ಜೀವನವನ್ನು ಹೇಗೆ ಸಾಗಿಸಬೇಕು? ಈ ಕಾರಣದಿಂದ ಒಂದೊಮ್ಮೆ ಈ ಎರಡು ಯೋಜನೆಯಡಿ ವಿಮೆ ಮಾಡಿಸಿದ್ದರೆ 4 ಲಕ್ಷ ವಿಮೆಯನ್ನು ಆ ಕುಟುಂಬಕ್ಕೆ ಸಿಗುತ್ತದೆ.

ಆರೋಗ್ಯಕ್ಕೆ ಸಂಬಂಧಪಟ್ಟ ವಿಮಾ ಯೋಜನೆಗಳು ಒಂದು ರೀತಿ ಇನ್ವೆಸ್ಟ್ ಮೆಂಟ್ ಇದಂತೆ ಇವು ಯಾವಾಗಲು ನಮ್ಮನ್ನು ಅರ್ಥಿಕವಾಗಿ ಸದೃಡರನ್ನಾಗಿ ಇರಿಸಿಕೊಳ್ಳಲು ನೆರವು ನೀಡುತ್ತವೆ ಅದ್ದರಿಂದ ನಾಗರಿಕರು ಈ ಎರಡು ವಿಮಾ ಯೋಜನೆಯಡಿ ವಿಮೆಯನ್ನು ತಪ್ಪದೇ ಮಾಡಿಸಿಕೊಳ್ಳಿ.

ಇದನ್ನೂ ಓದಿ: PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

Health insurance

ಇದನ್ನೂ ಓದಿ: Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

How To Apply For Insurance scheme-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ(PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(PMSBY) ಈ ಎರಡು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿದಾರರು ನಿಮ್ಮ ಹತ್ತಿರದ ಅಂಚೆ ಕಛೇರಿ ಅಥವಾ ಬ್ಯಾಂಕ್ ಶಾಖೆಯನ್ನು ನೇರವಾಗಿ ಅಗತ್ಯ ದಾಖಲಾತಿಗಳ ಸಮೇತ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

Required Documents For Insurance scheme-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

1) ಅರ್ಜಿ ನಮೂನೆ(ಬ್ಯಾಂಕ್ ಶಾಖೆ/ಅಂಚೆ ಕಚೇರಿಯಲ್ಲಿ ಪಡೆಯಬೇಕು)
2) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
3) ಬ್ಯಾಂಕ್ ಪಾಸ್ ಬುಕ್
4) ಅರ್ಜಿದಾರರ ಪೋಟೋ
5) ಮೊಬೈಲ್ ನಂಬರ್

ಇದನ್ನೂ ಓದಿ: Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

Who Can Apply For ಅರ್ಜಿಯನ್ನು ಸಲ್ಲಿಸಲು ಅರ್ಹರು:

1) ಈ ಯೋಜನೆಯಡಿ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿದಾರರು ಭಾರತ ದೇಶದ ನಾಗರಿಕರಾಗಿರುವುದು ಕಡ್ಡಾಯವಾಗಿದೆ.

2) ಅರ್ಜಿದಾರರ ವಯಸ್ಸು 18 ರಿಂದ 70 ವರ್ಷದ ಒಳಗಿರಬೇಕು.

PMJJBY Benefits-ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ(PMJJBY) ಪ್ರಯೋಜನಗಳು:

ಈ ಯೋಜನೆಯಡಿ ಅರ್ಜಿ ಸಲ್ಲಿಸಿ ವಿಮಾ ಯೋಜನೆಯಡಿ ನೋಂದಣಿಯನ್ನು ಮಾಡಿಕೊಂಡವರು ಯಾವುದೇ ಕಾರಣದಿಂಡ ಮರಣ ಹೊಂದಿದ್ದರೆ ಈ ವ್ಯಕ್ತಿ ಸೂಚಿಸಿರುವ ನಾಮಿನಿಗೆ ರೂ ₹2 ಲಕ್ಷ ವಿಮಾ ಮೊತ್ತವನ್ನು ನೀಡಲಾಗುತ್ತದೆ.

ಇದನ್ನೂ ಓದಿ: PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

PMSBY Benefits-ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(PMSBY) ಪ್ರಯೋಜನಗಳು:

ಅರ್ಜಿದಾರರು ಅಪಘಾತವಾಗಿ ಮರಣ ಹೊಂದಿದ್ದರೆ ಅಥವಾ ಶಾಶ್ವತ ಒಟ್ಟು ಅಂಗವೈಕಲ್ಯ ಹೊಂದಿದ್ದರು ಸಹ ಈ ಯೋಜನೆಯಡಿ ₹2 ಲಕ್ಷ ವಿಮೆಯನ್ನು ಪಡೆಯಬಹುದಾಗಿದೆ.

PMJJBY Guidelines-ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ(PMJJBY) ಯೋಜನೆಯ ಅಧಿಕೃತ ಮಾರ್ಗಸೂಚಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now

PMSBY Guidelines-ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(PMSBY) ವೆಬ್ಸೈಟ್- CLICK HERE

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

0

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ(Bisiuta) ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ.

2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ (karnataka government schools)ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲು ಇದಕ್ಕೆ ಸಂಬಂಧಿಸಿದಂತೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ.

2024-25ನೇ ಸಾಲಿಗಾಗಿ ಪಂಚಾಯತ್‌ಗಳಿಗೆ ಒದಗಿಸಲಾಗಿರುವ ಹಣದ ವಿವರಗಳಿಗೆ ಸಂಬಂಧಿಸಿದ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು ಅನುಷ್ಠಾನ ಮಾಡಲು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಕೆಳಕಂಡಂತೆ ಅನುದಾನವನ್ನು ಒದಗಿಸಲಾಗಿದೆ.

ಇದನ್ನೂ ಓದಿ: PM Surya Ghar-20 ವರ್ಷಗಳ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಹಣ ಸಂಪಾದನೆ!

ಸರ್ಕಾರದ ಆದೇಶದಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆಯ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಯೋಜನೆ ಕ್ಷೀರಭಾಗ್ಯ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02-300) 2 : 324 ಗೌರವ ಧನ ರಡಿ ನಿಗದಿಯಾಗಿರುವ ರೂ.30,300.00 ಲಕ್ಷಗಳ ಅನುದಾನದಿಂದ 2024-25ನೇ ಸಾಲಿನಲ್ಲಿ ಆಗಸ್ಟ್-2024 ರಿಂದ ಅಕ್ಟೋಬರ್-2024ರ ವರೆಗೆ 03 ತಿಂಗಳ ಅವಧಿಯ ಗೌರವ ಸಂಭಾವನೆವನ್ನು ಪಾವತಿಸಲು

ಕೇಂದ್ರದ ಪಾಲಿನ ಅನುದಾನ ರೂ.2039.71 ಲಕ್ಷಗಳು, ರಾಜ್ಯದ ಪಾಲಿನ ಅನುದಾನ ರೂ.1359.80 ಲಕ್ಷಗಳು ಹಾಗೂ ಹೆಚ್ಚುವರಿ ರಾಜ್ಯದ ಪಾಲಿನ ಅನುದಾನ ರೂ.8973.51 ಲಕ್ಷಗಳನ್ನು ಒಳಗೊಂಡಂತೆ ಒಟ್ಟಾರೆಯಾಗಿ ರೂ12,373.02 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ, ಆದೇಶದಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಮೊದಲನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ, ಸದರಿ ಅನುದಾನಕ್ಕೆ ಎದುರಾಗಿ ರೂ.7501.76 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Bisiuta

ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಮೊದಲನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಹಾಗೂ ರೂ.7501.76 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ(government schools), ಆದೇಶದಲ್ಲಿ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಎರಡನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ, ಸದರಿ ಅನುದಾನಕ್ಕೆ ಎದುರಾಗಿ ರೂ.7501.75 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನ ಮಾಡಲು ಎರಡನೇ ಕಂತಿನಲ್ಲಿ ಆವರ್ತಕ ವೆಚ್ಚಗಳಿಗೆ (Recurring Expenses) ರೂ.12703.63 ಲಕ್‌ಷಗಳ ಕೇಂದ್ರದ ಪಾಲಿನ ಅನುದಾನವನ್ನು, ಸದರಿ ಅನುದಾನಕ್ಕೆ ಎದುರಾಗಿ ರೂ.7501.75 ಲಕ್ಷಗಳ ರಾಜ್ಯದ ಪಾಲಿನ ಅನುದಾನ ಹಾಗೂ ರಾಜ್ಯ ಸರ್ಕಾರದಿಂದ ಭರಿಸಲಾಗುತ್ತಿರುವ ಅಡುಗೆ ಸಿಬ್ಬಂದಿಗಳ ಹೆಚ್ಚುವರಿ ಸಂಭಾವನೆ ಮೊತ್ತದ ರೂ.7575.00 ಲಕ್ಷಗಳ ರಾಜ್ಯದ ಪಾಲಿನ ಹೆಚ್ಚುವರಿ ಅನುದಾನವನ್ನು (State Top-up Amount) ಒಳಗೊಂಡಂತೆ ಒಟ್ಟಾರೆಯಾಗಿ ರೂ.27780.38 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯದ, ಆದೇಶದಲ್ಲಿ 2024-25ನೇ ಸಾಲಿನಲ್ಲಿ ಬರಪೀಡಿತ ಪ್ರದೇಶಗಳಲ್ಲಿ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ರೂ 2958.87 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿ ಸದರಿ ಅನುದಾನಕ್ಕೆ ಎದುರಾಗಿ ರೂ 1742.74 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.

ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆ, ಇವರು 2024-25ನೇ ಸಾಲಿನ ಏಪ್ರಿಲ್-ಮೇ-2024ರ 41 ದಿನಗಳ ಬೇಸಿಗೆ ರಜಾ ಅವಧಿಯಲ್ಲಿ ರಾಜ್ಯದ 31 ಜಿಲ್ಲೆಗಳ ಒಟ್ಟು 223 ಬರಪೀಡಿತ ತಾಲ್ಲುಕುಗಳ ವ್ಯಾಪ್ತಿಯಲ್ಲಿನ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ. ರೂ.2958.87 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು,

ಸದರಿ ಅನುದಾನಕ್ಕೆ ಎದುರಾಗಿ ರೂ.1742.74 ಲಕ್ಷಗಳ ರಾಜ್ಯದ ಪಾಲಿನ ಅನುದಾನವನ್ನು ಹಾಗೂ ರಾಜ್ಯ ಸರ್ಕಾರದಿಂದ ಭರಿಸಲಾಗುತ್ತಿರುವ ಅಡುಗೆ ಸಿಬ್ಬಂದಿಗಳ ಹೆಚ್ಚುವರಿ ಸಂಭಾವನೆ ಮೊತ್ತ 2692.17 ಲಕ್ಷಗಳನ್ನು (State Top-up Amount) ಒಳಗೊಂಡಂತೆ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನವನ್ನು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಬಿಡುಗಡೆ ಮಾಡುವಂತೆ ಕೋರಿರುತ್ತಾರೆ.

ಇದನ್ನೂ ಓದಿ: KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ:

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ರೂ.2958.87 ಲಕ್ಷಗಳ ಕೇಂದ್ರದ ಪಾಲಿನ ಅನುದಾನವನ್ನು, ಸದರಿ ಅನುದಾನಕ್ಕೆ ಎದುರಾಗಿ ರೂ.1742.74 ಲಕ್ಷಗಳ ರಾಜ್ಯದ ಪಾಲಿನ ಅನುದಾನ

ಹಾಗೂ ರಾಜ್ಯ ಸರ್ಕಾರದಿಂದ ಭರಿಸಲಾಗುತ್ತಿರುವ ಅಡುಗೆ ಸಿಬ್ಬಂದಿಗಳ ಹೆಚ್ಚುವರಿ ಸಂಭಾವನೆ ಮೊತ್ತ ರೂ.2692.17 ಲಕ್ಷಗಳ ರಾಜ್ಯದ ಪಾಲಿನ ಹೆಚ್ಚುವರಿ ಅನುದಾನವನ್ನು (State Top-up Amount) ಒಳಗೊಂಡಂತೆ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನವನ್ನು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಕೆಳಕಂಡಂತೆ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಆದೇಶದಲ್ಲಿ ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯ (ಮಧ್ಯಾಹ್ನ ಉಪಹಾರ ಯೋಜನೆ) Single Nodal Agency ಖಾತೆಗೆ ಜಮೆ ಮಾಡಿ, ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯ (ಮಧ್ಯಾಹ್ನ ಉಪಹಾರ ಯೋಜನೆ) ಅನುಷ್ಠಾನಕ್ಕಾಗಿ ನಿಯಮಾನುಸಾರ ಬಳಸಿಕೊಳ್ಳತಕ್ಕದ್ದು ಎಂದು ನೂತನ ಆದೇಶದಲ್ಲಿ ಉಲ್ಲೇಖಿಸಲಾಗಿದೆ.