Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

June 18, 2025 | Siddesh
Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!
Share Now:

ರಾಜ್ಯ ಸರ್ಕಾರದಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ(Parihara-2025) ಕಳೆದ 1 ತಿಂಗಳಿನಿಂದ ಉಂಟಾದ ಮನೆ ಮತ್ತು ಬೆಳೆ ಹಾನಿಗಳಿಗೆ ಅರ್ಹ ಅರ್ಜಿದಾರರಿಗೆ ಪರಿಹಾರದ ಹಣವನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಯೋಗದಲ್ಲಿ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಬೆಳೆ(Bele Pariahara) ಮತ್ತು ಮನೆ ಹಾನಿಗೆ ಯೋಜನೆಯ ಮಾರ್ಗಸೂಚಿಯ ಪ್ರಕಾರ ಅರ್ಹ ಫಲಾನುಭವಿಗಳಿಗೆ ಪರಿಹಾರವನ್ನು ಒದಗಿಸಲಾಗುತ್ತದೆ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Google Pay-ಗೂಗಲ್ ಪೇ ಮತ್ತು ಪೋನ್ ಪೇ ಹಣ ಪಾವತಿಯಲ್ಲಿ ಮಹತ್ವದ ಬದಲಾವಣೆ!

ಮನೆ ಹಾನಿಗೆ ಪರಿಹಾರ(Parihara Amount) ಬಿಡುಗಡೆಗೆ ಅಧಿಕೃತ ಆದೇಶದ ವಿವರ, ಮನೆ ಹಾನಿಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ?ಅರ್ಜಿ ಸಲ್ಲಿಸಲು ದಾಖಲಾತಿಗಳು,ಹಾನಿ ಪ್ರಮಾಣವಾರು ಮನೆಗೆ ಎಷ್ಟು ಪರಿಹಾರ ನೀಡಲಾಗುತ್ತದೆ?NDRF ಮಾರ್ಗಸೂಚಿ ಬೆಳೆ ಹಾನಿ ಪರಿಹಾರದ ಮೊತ್ತ ಎಷ್ಟು?ಮೊಬೈಲ್ ನಲ್ಲೇ ಪರಿಹಾರದ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ ಸೇರಿದಂತೆ ಇನ್ನಿತರೆ ಅಗತ್ಯ ವಿವರವನ್ನು ಇಲ್ಲಿ ತಿಳಿಸಲಾಗಿದೆ.

Mane hani parihara order details-2025:ಮನೆ ಹಾನಿಗೆ ಪರಿಹಾರ ಬಿಡುಗಡೆಗೆ ಅಧಿಕೃತ ಆದೇಶದ ವಿವರ ಹೀಗಿದೆ:

2025-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾಗುವ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರವನ್ನು ನೀಡುವ ಕುರಿತು ಸರ್ಕಾರದ ಆದೇಶ ನಿಗದಿಪಡಿಸಿರುವ ಪರಿಹಾರ ಮೊತ್ತವನ್ನು ಈ ಕೆಳಕಂಡಂತೆ ಪಾವತಿಸಲು ನಿರ್ದೇಶನಗಳನ್ನು ನೀಡಲಾಗಿದೆ.

ಅತಿವೃಷ್ಟಿ/ಪ್ರವಾಹದಿಂದ ಮನೆಯ ಗೋಡೆಗಳೊಂದಿಗೆ ಮೇಲ್ಮಾವಣಿ ಕುಸಿತ (Walls and roof collapse) (8.75% 3 ಹಾನಿಯಾದ ಮನೆಗಳನ್ನು ಸಂಪೂರ್ಣ ಹಾನಿಯಾದ ಮನೆಯೆಂದು ಪರಿಗಣಿಸಲು ಸೂಚಿಸಿದೆ.

ಮನೆಹಾನಿಯ ಪ್ರಮಾಣವನ್ನು ಈ ಮೇಲಿನಂತೆ ಗ್ರಾಮ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಇವರುಗಳು ಜಂಟಿಯಾಗಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸುವುದು.  ಕಾಲಮಿತಿಯೊಳಗೆ ನಿಯಮಾನುಸಾರ ಅರ್ಹ ಸಂತ್ರಸ್ಮರಿಗೆ ಪರಿಹಾರ ಪಾವತಿಸಲು ಕ್ರವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

mane hani parihara

ಭಾಗಶಃ ಮನೆ ಹಾನಿಗಾಗಿ ರೂ.50,000/- ಗಳ ವರೆಗೆ ಪಾವತಿಸಲಾಗುವ ಮನೆ ಹಾನಿ ಪರಿಹಾರ ಪಡೆಯುವ ಸಂತ್ರಸ್ಥರ ವಿವರಗಳಾದ, ಹಾನಿಯಾದ ಮನೆಯ ಜಿ.ಪಿ.ಎಸ್. ಛಾಯಾಚಿತ್ರ, ಆರ್.ಆರ್. ಸಂಖ್ಯೆ ಮತ್ತು ಆಧಾ‌ರ್ ಸಂಖ್ಯೆಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಜಿಲ್ಲಾಧಿಕಾರಿಗಳು ಕ್ರಮವಹಿಸತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪೂರ್ಣ ಹಾನಿಯಾದ ಮನೆಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ಹಂಚಿಕೆ ಪತ್ರವನ್ನು ಜಿಲ್ಲಾಧೀಕಾರಿಗಳ ಹಂತದಲ್ಲಿಯೇ RGRHCL ತಂತ್ರಾಂಶದ ಮೂಲಕ ವಿತರಿಸಲು ಸೂಚಿಸಿದೆ.

How to apply- ಮನೆ ಹಾನಿಗೆ ಅರ್ಜಿ ಸಲ್ಲಿಸುವ ವಿಧಾನ:

ಈ ವರ್ಷದ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನಲ್ಲಿ ಬಂದ ಮಳೆಗೆ ಮನೆಯಾನಿಯಾಗಿರುವ ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹಳ್ಳಿ ವ್ಯಾತಿಯ ಗ್ರಾಮ ಪಂಚಾಯತಿ/ಗ್ರಾಮ ಲೆಕ್ಕಾಧಿಕಾರಿ ಕಚೇರಿಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

Required documents-ಅರ್ಜಿ ಸಲ್ಲಿಸಲು ದಾಖಲಾತಿಗಳು:

1) ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.
2) ಬ್ಯಾಂಕ್ ಪಾಸ್ ಬುಕ್ ಪ್ರತಿ.
3) ಮನೆ ಹಾನಿ ಪೋಟೊ.
4) ಕುಟುಂಬದ ರೇಶನ್ ಕಾರ್ಡ ಪ್ರತಿ.
5) ಮೊಬೈಲ್ ನಂಬರ್

ಇದನ್ನೂ ಓದಿ: PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

Mane hani parihara amount- ಹಾನಿ ಪ್ರಮಾಣವಾರು ಮನೆಗೆ ಎಷ್ಟು ಪರಿಹಾರ ನೀಡಲಾಗುತ್ತದೆ?

ಅತೀ ಸಣ್ಣ ಪ್ರಮಾಣದ ಹಾನಿ (ಶೇ15% ಕ್ಕಿಂತ ಮೇಲ್ಪಟ್ಟು ಹಾಗೂ ಶೇ 20% ಕ್ಕಿಂತ ಕಡಿಮೆ), ಮನೆಯ ಮೇಲ್ಛಾವಣಿಯ ಹಂಚು/ಶೀಟುಗಳ, ಬಾಗಿಲು & ಕಿಟಕಿಗಳ ಹಾನಿ ಹಾಗೂ ಇನ್ನಿತರ ಸಣ್ಣ ಪುಟ್ಟ ಹಾನಿಗೆ- ರೂ 6,500/-

ಮಧ್ಯಮ ಪ್ರಮಾಣ ಮನೆ ಹಾನಿ (ಶೇ 20%ಕ್ಕಿಂತ ಮೇಲ್ಪಟ್ಟು ಹಾಗೂ ಶೇ 50% ಕ್ಕಿಂತ ಕಡಿಮೆ), ಮನೆಯ ಗೋಡೆಗಳಲ್ಲಿ ಬಿರುಕು/ಸಣ್ಣ ಪ್ರಮಾಣದ ಕುಸಿತ- ರೂ 25,000/-

ಹೆಚ್ಚು ಪ್ರಮಾಣದ ಮನೆ ಹಾನಿ (ಶೇ 50% ಕ್ಕಿಂತ ಮೇಲ್ಪಟ್ಟು ಆಗೂ ಶೇ 75% ಕ್ಕಿಂತ ಕಡಿಮೆ), ಮನೆಯ ಗೋಡೆಗಳ ಕುಸಿತ ಹಾಗೂ ಮೇಲ್ಚಾವಣೀಯ ಹಾನಿ- ರೂ 50,000/-

ಇದನ್ನೂ ಓದಿ: Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

parihara order

NDRF ಮಾರ್ಗಸೂಚಿ ಬೆಳೆ ಹಾನಿ ಪರಿಹಾರದ ಮೊತ್ತದ ವಿವರ ಹೀಗಿದೆ:

NDRF ಮಾರ್ಗಸೂಚಿಯ ಪ್ರಕಾರ ಬೆಳೆ ವಿಮೆ ಯೋಜನೆಯನ್ನು ಹೊರತುಪಡಿಸಿ ಬೆಳೆ ಹಾನಿ ಪರಿಹಾರ ಯೋಜನೆಯಡಿ ಅತೀಯಾದ ಮಳೆಯಿಂದ ಹಾನಿಗೆ ಒಳಗಾದ ಬೆಳೆ ಕ್ಷೇತ್ರಕ್ಕೆ ಈ ಕೆಳಗೆ ತಿಳಿಸಿರುವ ಪರಿಹಾರದ ಆರ್ಥಿಕ ನೆರವನ್ನು ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ನೀಡಲಾಗುತ್ತದೆ.

  • ಒಂದು ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದರೆ- ರೂ 22,500.
  • ಒಂದು ಎಕರೆ ಕೃಷಿ ಬೆಳೆ ಹಾನಿಯಾಗಿದ್ದರೆ- ರೂ ರೂ 8,500 ರಿಂದ ರೂ 13,500 ಪರಿಹಾರವನ್ನು ಒದಗಿಸಲಾಗುತ್ತದೆ.
crop loss amount

How to apply- ಬೆಳೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ:

ರಾಜ್ಯ ಸರಕಾರದಿಂದ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಅರ್ಥಿಕವಾಗಿ ನೆರವು ನೀಡಲು ಪರಿಹಾರವನ್ನು ಒದಗಿಸಲಾಗಿದ್ದು ಅರ್ಹ ಫಲಾನುಭವಿ ನಾಗರಿಕರು ಮನೆ ಹಾನಿಗೆ ಒಳಗಾಗಿದರೆ ನಿಮ್ಮ ಹಳ್ಳಿಯ ಗ್ರಾಮ ಪಂಚಾಯತಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಕೃಷಿ ಬೆಳೆ ಉದಾಹರಣೆಗೆ ಭತ್ತ, ಮೆಕ್ಕೆಜೋಳ್, ರಾಗಿ ಬೆಳೆಗಳು ಅತೀಯಾದ ಮಳೆಯಿಂದ ಹಾನಿಯಾಗಿದರೆ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಇದೇ ರೀತಿ ತೋಟಗಾರಿಕೆ ಬೆಳೆ ಹಾನಿಯಾಗಿದರೆ ತೋಟಗಾರಿಕೆ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿದಾರರ ಆಧಾರ್ ಕಾರ್ಡ ಪ್ರತಿ, ಬ್ಯಾಂಕ್ ಪಾಸ್ ಬುಕ್, ಜಮೀನಿನ ಪಹಣಿ/RTC/ಸರ್ವೆ ನಂಬರ್ ಅನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Parihara website-ಅರ್ಹ ಅರ್ಜಿದಾರರಿಗೆ ಪರಿಹಾರ ವಿತರಿಸಲು ಡಿಜಿಟಲ್ ವ್ಯವಸ್ಥೆ:

ಬೆಳೆ ಮತ್ತು ಮನೆ ಹಾನಿ ಪರಿಹಾರದ ಆರ್ಥಿಕ ನೆರವನ್ನು ಮಧ್ಯವರ್ತಿಯ ಹಾವಲಿಯಿಲ್ಲದ ಅರ್ಹ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ ಪರಿಹಾರದ ಅರ್ಜಿ ವಿಲೇವಾರಿಗೆ Parihara ತಂತ್ರಾಂಶವನ್ನು ಅಭಿವೃದ್ದಿಪಡಿಸಲಾಗಿದೆ.

ಈ ಜಾಲತಾಣದಲ್ಲಿ ಇಲಾಖೆಯ ಅಧಿಕಾರಿಗಳು ಮೊದಲ ಹಂತದಲ್ಲಿ ಅರ್ಜಿದಾರರು ಸಲ್ಲಿರುವ ಅರ್ಜಿಯನ್ನು ಅಪ್ಲೋಡ್ ಮಾಡಲಾಗುತ್ತದೆ ಬಳಿಕ ದಾಖಲಾತಿ ಮತ್ತು ಸ್ಥಳ ಪರೀಶಿಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ(DBT) ಮೂಲಕ ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಓದಿ: PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

Documents For Bele Parihara-ಅರ್ಜಿ ಸಲ್ಲಿಸಲು ದಾಖಲೆಗಳು:

ರೈತರ ಹಾನಿಯಾದ ಜಮೀನಿನ ಪಹಣಿ/ಊತಾರ್/RTC
ಆಧಾರ್ ಕಾರ್ಡ/Aadhar
ಬ್ಯಾಂಕ್ ಪಾಸ್ ಬುಕ್/Bank Pass
ಮೊಬೈಲ್ ನಂಬರ್/Mobile number

Parihara Status Check-ಮೊಬೈಲ್ ನಲ್ಲೇ ಪರಿಹಾರದ ಅರ್ಜಿ ಸ್ಥಿತಿ ತಿಳಿಯಿರಿ:

ಬೆಳೆ ಮತ್ತು ಮನೆ ಹಾನಿ ಪರಿಹಾರ ಪಡೆಯಲು ಅರ್ಜಿಯನ್ನು ಸಲ್ಲಿಸಿದವರು ಮನೆಯಲ್ಲೇ ಕುಳಿತು ನೀವು ಸಲ್ಲಿಸಿರುವ ಅರ್ಜಿಯು ಯಾವ ಹಂತದಲ್ಲಿದೆ ಎಂದು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದು.

Step-1: ಪ್ರಥಮ ಹಂತದಲ್ಲಿ ಅರ್ಜಿದಾರರು ಈ "Parihara Status Check" ಲಿಂಕ್ ಮೇಲೆ ಕ್ಲಿಕ್ ಮಾಡಿ ಕಂದಾಯ ಇಲಾಖೆಯಿಂದ ಅಭಿವೃದ್ದಿಪಡಿಸಿರುವ Parihara ತಂತ್ರಾಂಶವನ್ನು ಪ್ರವೇಶ ಮಾಡಬೇಕು.

Bele parihara

Step-2: ಬಳಿಕ ಈ ಪೇಜ್ ನಲ್ಲಿ ಎಡಬದಿಯಲ್ಲಿ ಕಾಣುವ "Citizen Login" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ಮೊಬೈಲ್/ಆಧಾರ್ ನಂಬರ್ ಅನ್ನು ಹಾಕಿ ನಿಮ್ಮ ಪರಿಹಾರದ ಅರ್ಜಿಯು ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೋಡಬಹುದು

WhatsApp Group Join Now
Telegram Group Join Now
Share Now: