PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

June 16, 2025 | Siddesh
PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!
Share Now:

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅರ್ನರಿರುವ ಫಲಾನುಭವಿಗಳನ್ನು ಗುರುತಿಸಿ ಇಂತಹ ರೈತರಿಗೆ ಈ ಯೋಜನೆಯಡಿ ಹಣ ಜಮಾ ಅಗುವುದನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದರ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan Yojana)ತಲಾ ಮೂರು ಕಂತುಗಳಲ್ಲಿ ರೂ 2,000/- ದಂತೆ ಒಂದು ವರ್ಷಕ್ಕೆ ರೂ 6,000/- ಆರ್ಥಿಕ ನೆರವನ್ನು ದೇಶದ 9.59 ಕೋಟಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಅರ್ಹ ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಅನರ್ಹ ಫಲಾನುಭವಿಗಳನ್ನು ಈ ಯೋಜನೆಯಿಂದ ಹೊರಗಿಡಲು ನೂತನ ಕ್ರಮವನ್ನು ಸರ್ಕಾರ ಜಾರಿಗೆ ತಂದಿದೆ.

ಇದನ್ನೂ ಓದಿ: Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಪ್ರಸ್ತುತ ಈ ಲೇಖನದಲ್ಲಿ ಅರ್ಜಿದಾರರು ಪಿಎಂ ಕಿಸಾನ್(PM Kisan New Update) ಅನರ್ಹ ಮತ್ತು ಅರ್ಹ ಪಟ್ಟಿಯನ್ನು ತಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂದು ಹಾಗೂ ಈ ಯೋಜನೆಯಡಿ ಅರ್ಹ ಮತ್ತು ಅನರ್ಹ ರೈತರನ್ನು ಗುರುತಿಸಲು ಸರ್ಕಾರದ ಮಾರ್ಗಸೂಚಿ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

PM Kisan Scheme-335 ಕೋಟಿ ಹಣ ವಾಪಾಸ್ ಪಡೆಯಲಾಗಿದೆ:

ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿಯನ್ವಯ "ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ"ಯಡಿ ವಾರ್ಷಿಕ ರೂ 6,000/- ಹಣವನ್ನು ಪಡೆಯಲು ನಕಲಿ ದಾಖಲೆಗಳನ್ನು ಸೃಷ್ಟಿಸಿ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಹಣವನ್ನು ಪಡೆಯುತ್ತಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಇಲ್ಲಿಯವರೆಗೆ 335 ಕೋಟಿ ಹಣವನ್ನು ಮರಳಿ ಹಿಂತೆಗೆದುಕೊಳ್ಳಲಾಗಿದೆ ಎಂದು ಅಂಕಿ-ಅಂಶದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

PM Kisan Ineligible List-ಅನರ್ಹ ಫಲಾನುಭವಿಗಳಿಗೆ ಸಂದೇಶ ರವಾನೆ:

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಇಲ್ಲಿಯವರೆಗೆ ಹಣವನ್ನು ಪಡೆಯುತ್ತಿದ್ದು ಮಾರ್ಗಸೂಚಿಯ ಪ್ರಕಾರದ ಅನರ್ಹರಾಗಿರುವ ಫಲಾನುಭವಿ ರೈತರ ಮೊಬೈಲ್ ಸಂಖ್ಯೆಗೆ ಈ ಕೆಳಗಿನ ಚಿತ್ರದಲ್ಲಿ ಗೋಚರಿಸುವ ರೀತಿಯನ್ನು ಸರ್ಕಾರದ ಸಂಬಂಧಪಟ್ಟ ಇಲಾಖೆಯಿಂದ ಸಂದೇಶವನ್ನು ಕಳುಹಿಸಲಾಗಿದೆ.

ಈ ಸಂದೇಶದಲ್ಲಿ ಅರ್ಜಿದಾರರ ಆಧಾರ್ ಸಂಖ್ಯೆಯ ಕೊನೆಯ ನಾಲ್ಕು ಅಂಕಿಯನ್ನು ನಮೂದಿಸಿ ನೀವು ಈ ಯೋಜನೆಯಡಿ ಹಣ ಪಡೆಯಲು ಅನರ್ಹರಾಗಿರುವ ಕಾರಣ ನಿಮಗೆ ಈ ಯೋಜನೆಯಡಿ ಆರ್ಥಿಕ ನೆರವನ್ನು ವರ್ಗಾವಣೆ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

PM Kisan

ಇದನ್ನೂ ಓದಿ: Cow mat Subsidy-50% ಸಬ್ಸಿಡಿಯಲ್ಲಿ ಕೌ ಮ್ಯಾಟ್ ಪಡೆಯಲು ಅರ್ಜಿ ಆಹ್ವಾನ!

PM Kisan eligible farmer List-ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡುವ ವಿಧಾನ:

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಈ ಕೆಳಗಿನ ವಿಧಾನವನ್ನು ಅನುಸರಿಸಿ ರೈತರು ಮನೆಯಲ್ಲೇ ಇದ್ದು ತಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

Step-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ PM Kisan eligible farmer List-2025 ಮಾಡಿ ಅಧಿಕೃತ ಕೇಂದ್ರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಮುಖಪುಟದ ಬಲಬದಿಯಲ್ಲಿ ಕಾಣುವ "Beneficiary List" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ರಾಜ್ಯ,ನಿಮ್ಮ ಜಿಲ್ಲೆ,ತಾಲ್ಲೂಕು,ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು "Get Report" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯಲ್ಲಿ ಈ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ರೈತರ ಹೆಸರಿನ ಪಟ್ಟಿ ಗೋಚರಿಸುತ್ತದೆ.

PM-Kisan ineligible criteria- ಅನರ್ಹ ಫಲಾನುಭವಿಗಳು ಗುರುತಿಸಲು ಸರ್ಕಾರದಿಂದ ನಿಗದಿಪಡಿಸಿದ ಮಾರ್ಗಸೂಚಿ ಹೀಗಿದೆ:

ಪಿಎಂ ಕಿಸಾನ್ ಯೋಜನೆಯಡಿ ಅನರ್ಹ ಪಲಾನುಭವಿ ರೈತರನ್ನು ಗುರುತಿಸಲು ಸರ್ಕಾರವು ಈ ಕೆಳಗೆ ತಿಳಿಸಿರುವ ನಿಯಮಗಳನ್ನು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹಿಂದಿನ ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅನರ್ಹರು.

ಅರ್ಜಿದಾರರು ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆ ಮತ್ತು ನಿಗಮಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಕೃಷಿ ಜಮೀನನ್ನು ಹೊಂದಿರದೇ ಕೃಷಿಯೇತರ ಜಮೀನಿನ ಮೇಲೆ ಅರ್ಜಿ ಸಲ್ಲಿಸಿದರುವ ಅನರ್ಹರು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

GST ಪಾವತಿ ಮಾಡುತ್ತಿರುವವರು ಹಾಗೂ ಸ್ವಂತ ಉದ್ದಿಮೆಯನ್ನು ಹೊಂದಿ ಅರ್ಜಿ ಸಲ್ಲಿಸಿದವರು ಅನರ್ಹ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

PM Kisan Eligibility Criteria-ಯಾರೆಲ್ಲ ಪಿಎಂ ಕಿಸಾನ್ ಯೋಜನೆಯ ಆರ್ಥಿಕ ನೆರವನ್ನು ಪಡೆಯಬಹುದು?

  • ಅರ್ಜಿದಾರರು ತಮ್ಮ ಹೆಸರಿನಲ್ಲಿ ಕೃಷಿ ಜಮೀನನ್ನು ಹೊಂದಿರಬೇಕು.
  • ಆದಾಯ ತೆರಿಗೆ ಮತ್ತು GST ಪಾವತಿದಾರರನ್ನು ಹೊರತುಪಡಿಸಿ ಉಳಿದವರು ಅರ್ಜಿ ಸಲ್ಲಿಸಬಹುದು.
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆ/ನಿಗಮಗಳಲ್ಲಿ ಅರ್ಜಿದಾರ ಕುಟುಂಬದ ಸದಸ್ಯರು ಇರಬಾರದು ಇಂಹತ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬಹುದು.

PM Kisan Campaign-ಅರ್ಹ ರೈತರನ್ನು ಗುರುತಿಸಲು ಕೇಂದ್ರದಿಂದ ಅಭಿಯಾನ:

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಇ-ಕೆವೈಸಿಯನ್ನು ಮಾಡಿಕೊಳ್ಳದೇ ಇರುವವರಿಗೆ 20 ನೇ ಕಂತಿನ ಹಣ ಜಮಾ ಅಗುವುದಿಲ್ಲ ಈ ಕಾರಣದಿಂದ ಅರ್ಹ ರೈತರು ಇ-ಕೆವೈಸಿಯನ್ನು ಮಾಡಿಕೊಳ್ಳುವಂತೆ ಎಲ್ಲಾ ರೈತರಿಗೆ ಮಾಹಿತಿಯನ್ನು ತಲುಪಿಸಲು ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯಡಿ ಕಳೆದ ಒಂದು ತಿಂಗಳಿಂದ ಅಭಿಯಾನವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನ ಮೂಲಕ ಇಲ್ಲಿಯವರೆಗೆ ಅರ್ಹರಿದ್ದು ಪಿಎಂ ಕಿಸಾನ್ ಯೋಜನೆಯ ಅರ್ಜಿಯ ಇ-ಕೆವೈಸಿಯನ್ನು ಮಾಡಿಕೊಳ್ಳದವರು ಕೆವೈಸಿಯನ್ನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: PM Kusum Yojana-ಹಗಲು ವೇಳೆಯಲ್ಲಿಯೇ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ನೂತನ ಯೋಜನೆ!

PM Kisan e-KYC- ಇ-ಕೆವೈಸಿ ಏಕೆ ಮಾಡಿಸಬೇಕು?

ನಕಲಿ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನವನ್ನು ತಪ್ಪಿಸಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಲಾಭವನ್ನು ತಲುಪಿಸಲು ಫಲಾನುಭವಿಗಳ ನೈಜತೆಯನ್ನು ಖಚಿತಪಡಿಸಿಕೊಳ್ಳಲು ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲಾ ರೈತರು ಆಧಾರ್ ಕಾರ್ಡ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ OTP ಆಧಾರಿತ ಅಥವಾ Face authentication ಮೂಲಕ ತಮ್ಮ ಹತ್ತಿರದ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಕೆವೈಸಿಯನ್ನು ಮಾಡಿಕೊಳ್ಳಬೇಕು.

Kisan samman nidhi-ರ‍ೈತರಿಗೆ ಸೂಚನೆಗಳು:

  • ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆ ಅರ್ಜಿಗೆ ಸಂಬಂಧಪಟ್ಟಂತೆ ಕೃಷಿ ಇಲಾಖೆಯನ್ನು ಭೇಟಿ ಮಾಡಿ ಇ-ಕೆವೈಸಿಯನ್ನು ಮಾಡಿಕೊಳ್ಳದವರು ಕೂಡಲೇ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಇ-ಕೆವೈಸಿ ಮಾಡಿಕೊಳ್ಳಿ.
  • ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ ಲಿಂಕ್/NPCI Mapping ಮಾಡಿಕೊಳ್ಳದವರು ಸಹ ತಮ್ಮ ಬ್ಯಾಂಕ್ ಶಾಖೆಯನ್ನು ಭೇಟಿ ಮಾಡಿ ಆಧಾರ್ ಲಿಂಕ್ ಮಾಡಿಕೊಳ್ಳಿ.

For More Information-ಇನ್ನು ಅಧಿಕ ಮಾಹಿತಿಯನ್ನು ಪಡೆಯಲು ಉಪಯುಕ್ತ ಕೊಂಡಿಗಳು:

ರಾಜ್ಯ ಸರ್ಕಾರದ ವೆಬ್ಸೈಟ್-Click Here
ಕೇಂದ್ರ ಸರ್ಕಾರದ ವೆಬ್ಸೈಟ್-Click Here
ಸಹಾಯವಾಣಿ-1800 180 1551(6-00 AM To 10-00 PM)

WhatsApp Group Join Now
Telegram Group Join Now
Share Now: