PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!

Facebook
Twitter
Telegram
WhatsApp

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಉತ್ತಮ ಮುಂಗಾರು ಮಳೆಯಾಗುತ್ತಿದ್ದು ಬಿತ್ತನೆ ಕಾರ್ಯದಲ್ಲಿ ತೊಡಗಿರುವ ರೈತರಿಗೆ ಸಿಹಿ ಸುದ್ದಿ ನೀಡಿರುವ ಸರಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM-kisan amount) ಅಧಿಕೃತ ಎಕ್ಸಾ ಖಾತೆಯಲ್ಲಿ 17ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡುವ ದಿನಾಂಕವನ್ನು ಪ್ರಕಟಿಸಿದೆ.

ಈ ಯೋಜನೆಯಡಿ ಯಾವ ದಿನದಂದು(pm kisan 17th installment date 2024) ರೂ 2,000 ರೈತರ ಖಾತೆಗೆ ಜಮಾ ಅಗಲಿದೆ ಮತ್ತು ಪಿ ಎಂ ಕಿಸಾನ್ ಯೋಜನೆಯಡಿ ಹಣ ಪಡೆಯಲು ಇ-ಕೆವೈಸಿ ಮಾಡಿಕೊಳ್ಳುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರ ರೈತರಿಗೂ ಮಾಹಿತಿ ತಿಳಿಯಲು ಸಹಕರಿಸಿ.

ಇದನ್ನೂ ಓದಿ: fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!

pm kisan 17th installment official release date 2024: 17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ:

ಕೇಂದ್ರ ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ಎಕ್ಸಾ ಖಾತೆಯಲ್ಲಿ 17ನೇ ಕಂತಿನ ಹಣವನ್ನು ರೈತರ ಖಾತೆಗ್ ಜಮಾ ಮಾಡುವ ದಿನಾಂಕವನ್ನು ಪ್ರಕಟಿಸಲಾಗಿದ್ದು, ದಿನಾಂಕ: 18 ಜೂನ್ 2024 ರಂದು ದೇಶದ ಎಲ್ಲಾ ರೈತರ ಖಾತೆಗೆ ಏಕ ಕಾಲಕ್ಕೆ ನೇರ ನಗದು ವರ್ಗಾವಣೆಯ ಮೂಲಕ ರೂ 2,000 ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

PM-kisan e-KYC: 17ನೇ ಕಂತಿನ ಹಣ ಪಡೆಯಲು ತಪ್ಪದೇ ಮಾಡಿಸಿ ಇ-ಕೆವೈಸಿ:

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕಂತಿನ ಹಣ ಪಡೆಯಲು ಇಲ್ಲಿಯವರೆಗೆ ಇ-ಕೆವೈಸಿ ಮಾಡಿಸದ ರೈತರು ಕೂಡಲೇ ನಿಮ್ಮ ಹೋಬಳಿಯ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಈ 18 ಜೂನ್ 2024 ದಿನಾಂಕದ ಒಳಗಾಗಿ ಕಚೇರಿ ಭೇಟಿ ಮಾಡಿ ಇ-ಕೆವೈಸಿ ಮಾಡಿಸಿಕೊಳ್ಳಿ. 

ಇದನ್ನೂ ಓದಿ: SBI Bank Recruitment-2024: SBI ಬ್ಯಾಂಕ್ ನಿಂದ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ! ವೇತನ ₹69,810!

Required Documents for e-KYC: ಇ-ಕೆವೈಸಿ ಮಾಡಿಸಲು ಬೇಕಾಗುವ ದಾಖಲಾತಿಗಳು:

1) ಆಧಾರ್ ಕಾರ್ಡ ಪ್ರತಿ.
2) ಮೊಬೈಲ್ ಮತ್ತು ಮೊಬೈಲ್ ಸಂಖ್ಯೆ(OTP ಪಡೆಯಲು ಬೇಕಾಗುತ್ತದೆ).
3) ಅರ್ಜಿದಾರ.

ಇ-ಕೆವೈಸಿ ಮಾಡಿಸದಿದ್ದರೆ ಹಣ ಜಮಾ ಅಗುವುದಿಲ್ಲ:

ಒಂದೊಮ್ಮೆ ಇ-ಕೆವೈಸಿ ಮಾಡಿಸಿಲ್ಲದ ರೈತರು 18 ಜೂನ್ 2024ರ ಒಳಗಾಗಿ ಇ-ಕೆವೈಸಿ ಮಾಡಿಸದೇ ಇದ್ದರೆ 17ನೇ ಕಂತಿನ ಹಣ ಜಮಾ ಅಗುವುದಿಲ್ಲ.

ಇದನ್ನೂ ಓದಿ: PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 16ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

ಇ-ಕೆವೈಸಿ ಏಕೆ ಮಾಡಿಸಬೇಕು?

ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಎಲ್ಲಾ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು ಎಂದು ಈ ಹಿಂದೆಯೇ ಪ್ರಕಟಣೆ ಹೊರಡಿಸಲಾಗಿರುತ್ತದೆ. ಇದನ್ನು ಏಕೆ ಮಾಡಿಸಬೇಕು ಎನ್ನುವ ಪ್ರಶ್ನೆಗೆ ಉತ್ತರ ವಿವರ ಹೀಗಿದೆ.

ನಕಲಿ ಫಲಾನುಭವಿಗಳಿಗೆ ಈ ಯೋಜನೆಯಡಿ ಹಣ ಸಂದಾಯವಾಗುವುದನ್ನು ತಡೆಯಲು ಇ-ಕೆವೈಸಿ ಸಹಕಾರಿಯಾಗಿದೆ. ಜೊತೆಗೆ ನೈಜ ಅರ್ಹ ಫಲಾನುಭವಿಗಳಿಗೆಯೇ ಈ ಯೋಜನೆಯಡಿ ಹಣ ಸಂದಾಯವಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಲು ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ. 

ಮರಣ ಹೊಂದಿದ ಫಲಾನುಭವಿಗಳನ್ನು ಗುರುತಿಸಿ ಈ ಯೋಜನೆಯ ಹಣ ಅವರ ಖಾತೆಗೆ ಜಮಾ ಅಗುವುದನ್ನು ನಿಲ್ಲಿಸಲು ಇ-ಕೆವೈಸಿ ಮಾಡಲು ಎಲ್ಲಾ ಫಲಾನುಭವಿಗಳಿಗೆ ಸೂಚಿಸಲಾಗಿದೆ.

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ