Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

October 7, 2025 | Siddesh
Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!
Share Now:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ(Scholarship Application),ಶುಲ್ಕ ಮರುಪಾವತಿ,ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ(Vidyasiri Yojana Application) ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗತ್ತಿರುವ 'ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ. "ಶುಲ್ಕ ಮರುಪಾವತಿ", ಮತ್ತು 'ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ", ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

ಇಂದಿನ ಅಂಕಣದಲ್ಲಿ ಈ ಮೂರು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.

Last Date For SSP Scholarship-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 31 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ.

karnataka scholarship

Who Can Apply For Scholarship-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ವಿದ್ಯಾರ್ಥಿಯು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಪಿಯುಸಿ,ಡಿಪ್ಲೋಮಾ,ಪದವಿ,ಸ್ನಾತಕೋತ್ತರ ಪದವಿ,ತಾಂತ್ರಿಕ, ವೃತ್ತಿಪರ ಕೋರ್ಸ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ಬರುವ ಪ್ರವರ್ಗ-1,ಅಲೆಮಾರಿ/ಅರೆಅಲೆಮಾರಿ ಕುಟುಂಬಕ್ಕೆ ಸೇರಿದವರಾಗಿರಬೇಕು.
  • ವಿದ್ಯಾರ್ಥಿಯ ಕುಟುಂಬದ ಆದಾಯವು ವರ್ಷಕ್ಕೆ ಪ್ರವರ್ಗ-1ಕ್ಕೆ ರೂ 2.5 ಲಕ್ಷ ಇತರೆ ವರ್ಗಗಳಿಗೆ ರೂ 1.0 ಲಕ್ಷದ ಒಳಗಿರಬೇಕು.

ಇದನ್ನೂ ಓದಿ: Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

How To Apply for Vidyasiri Scholarship-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇದಕ್ಕಾಗಿ ಕೆಳಗಿನಾ ಹಂತಗಳನ್ನು ಅನುಸರಿಸಿ.

Step-1: ವಿದ್ಯಾರ್ಥಿಗಳು ಪ್ರಥಮದಲ್ಲಿ ಇಲ್ಲಿ ಕ್ಲಿಕ್ "Vidyasiri Scholarship Online Application" ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

Vidyasiri Scholarship

ಇದನ್ನೂ ಓದಿ: Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Step-2: ಬಳಿಕ ಈ ಪೇಜ್ ನಲ್ಲಿ ಕೊನೆಯಲ್ಲಿ ಗೋಚರಿಸುವ "Online Application" ಕಾಲಂ ಮುಂದೆ ಇರುವ "Click here to Apply" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಈ ಪುಟದಲ್ಲಿ "2025-26ನೇ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ಮೊದಲ ಬಾರಿಗೆ ಈ ವೆಬ್ಸೈಟ್ ಭೇಟಿ ಮಾಡುತ್ತಿರುವವರು ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-4: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದಿಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Bajaj Scholarship-ಬಜಾಜ್ ಸ್ಕಾಲರ್‌ಶಿಪ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹8.0 ಲಕ್ಷದವರೆಗೆ ವಿದ್ಯಾರ್ಥಿವೇತನ!

Documents For Scholarship Application-ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳ ಪಟ್ಟಿ ಹೀಗಿದೆ:

ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಅಗತ್ಯವಾಗಿ ಒದಗಿಸಬೇಕಾದ ದಾಖಲೆಗಳು:

  • ವಿದ್ಯಾರ್ಥಿಯ ಆಧಾರ್ ಕಾರ್ಡ.
  • ಬ್ಯಾಂಕ್ ಪಾಸ್ ಬುಕ್.
  • ಪೋಟೋ.
  • ಶಾಲಾ ವ್ಯಾಸಂಗ ಪ್ರಮಾಣ ಪತ್ರ.
  • ಪೋಷಕರ ಆದಾಯ ಮತ್ತು ಜಾತಿ ಪ್ರಮಾಣ ಪತ್ರ.
  • ಮೊಬೈಲ್ ನಂಬರ್ ಮತ್ತು ಮೇಲ್ ಐಡಿ.

Helpline Number- ಸಹಾಯವಾಣಿ ಸಂಖ್ಯೆ: 8050770005
BCWD Official Website-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್-Click Here
Official Notification-ಅಧಿಕೃತ ಪ್ರಕಟಣೆ ಪ್ರತಿ-Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: