Scholarship-ಕೈಂಡ್ ಸರ್ಕಲ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

December 13, 2025 | Siddesh
Scholarship-ಕೈಂಡ್ ಸರ್ಕಲ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!
Share Now:

2025-26 ನೇ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಂಡ್ ಸರ್ಕಲ್ ವಿದ್ಯಾರ್ಥಿವೇತನದ(Scholarship) ಅಡಿಯಲ್ಲಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 6,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಸಮಾಜದ ಹಿಂದುಳಿದ ವರ್ಗದ ಶೈಕ್ಷಣಿಕವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕಾಗಿ ಅಡಿಪಾಯವನ್ನು ನಿರ್ಮಿಸಲು ಬೆಂಬಲ ನೀಡುವ ಉದ್ದೇಶದಿಂದ ಈ ವಿದ್ಯಾರ್ಥಿವೇತನವನ್ನು(Scholarship Application) ಜಾರಿಗೆ ತರಲಾಗಿದೆ.

ಇದನ್ನೂ ಓದಿ: Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

ಪ್ರಸ್ತುತ ಈ ವಿದ್ಯಾರ್ಥಿವೇತನದ(Student Scholarship Application) ಅಡಿಯಲ್ಲಿ ವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಲಗತ್ತಿಸಬೇಕಾದ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿಯನ್ನು ಯಾವೆಲ್ಲ ಕ್ರಮಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬೇಕು? ಇದರ ಅಡಿ ಎಷ್ಟು ವಿದ್ಯಾರ್ಥಿವೇತನ ಪಡೆಯಬಹುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ವಿವರಿಸಲಾಗಿದೆ.

Last Date To APply-ಅರ್ಜಿ ಸಲ್ಲಿಕೆಯ ಮುಕ್ತಾಯದ ದಿನಾಂಕ: 25 ಮಾರ್ಚ್ 2026

Who Can Apply this Scholorship-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ಪ್ರಜೆಯಾಗಿರಬೇಕು.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಮೀರಿರಬಾರದು.

ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ಅಭ್ಯರ್ಥಿಯು ಶಾಲೆ ಅಥವಾ ಕಾಲೇಜಿನಲ್ಲಿ ದಾಖಲಾದ 1 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಇದನ್ನೂ ಓದಿ: PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

Documents Required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ಕೊನೆಯ ಅರ್ಹತಾ ಪರೀಕ್ಷೆಯ ಅಂಕಪಟ್ಟಿ/Marks Card

ಆದಾಯ ಪ್ರಮಾಣಪತ್ರ/Income Certificate

ಆಧಾರ್ ಕಾರ್ಡ/Aadhar card.

ರೇಶನ್ ಕಾರ್ಡ/Ration Card

ಶಾಲೆ/ಕಾಲೇಜು ಗುರುತಿನ ಚೀಟಿ/Identity Card

ಪ್ರಸ್ತುತ ವರ್ಷದ ಶುಲ್ಕ ರಶೀದಿ/Curent year reciept

ಮೊಬೈಲ್ ನಂಬರ್/Mobile Number

ಬ್ಯಾಂಕ್ ಪಾಸ್ ಪುಸ್ತಕ/Bank Passbook

ಇದನ್ನೂ ಓದಿ: Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

scholarship application

Online Application Process-ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?

ಕೈಂಡ್ ಸರ್ಕಲ್ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತಿ ಇರುವ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶವಿದ್ದು ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಅಭ್ಯರ್ಥಿಯು ಮೊದಲಿಗೆ ಈ ಲಿಂಕ್ "Apply Now" ಮೇಲೆ ಕ್ಲಿಕ್ ಮಾಡಿ "www.buddy4study.com" ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

Step-2: ಇದಾದ ಬಳಿಕ ಈ ಪೇಜ್ ನಲ್ಲಿ "Apply Now" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಆಗಬೇಕು.

Step-3: ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

More Information About Scholorship-ಈ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: