Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

June 18, 2025 | Siddesh
Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!
Share Now:

ರಾಜ್ಯ ಸರ್ಕಾರದಿಂದ ಯುವನಿಧಿ(Yuvanidhi) ಯೋಜನೆಯಡಿ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ರೂ 3,000/- ದವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದಿಂದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಲು ಆರ್ಥಿಕವಾಗಿ ನೆರವನ್ನು ನೀಡುವ ನಿಟ್ಟಿನಲ್ಲಿ ಯುವನಿಧಿ ಯೋಜನೆಯಡಿ(Yuvanidhi Yojana) ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

ಈ ಯೋಜನೆಯಡಿ(Yuvanidhi online application) ಅರ್ಜಿಯನ್ನು ಸಲ್ಲಿಸಿ ಯಾರೆಲ್ಲ ಪ್ರಯೋಜನವನ್ನು ಪಡೆದುಕೊಳ್ಳಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇನ್ನಿತರೆ ಅಗತ್ಯವಾದ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply-ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
  • ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇರದವರು.ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು.
  • ಕನಿಷ್ಟ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು.

ಇದನ್ನೂ ಓದಿ: Google Pay-ಗೂಗಲ್ ಪೇ ಮತ್ತು ಪೋನ್ ಪೇ ಹಣ ಪಾವತಿಯಲ್ಲಿ ಮಹತ್ವದ ಬದಲಾವಣೆ!

Yuvanidhi Scheme-2025: ಯೋಜನೆಯ ವಿವರ ಹೀಗಿದೆ:

ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಮಹತ್ತರ ಯೋಜನೆಯಾಗಿರುತ್ತದೆ. ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆವಾರು ರೂ.3,000/- ಮತ್ತು ಡಿಪ್ಲೋಮಾ (6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆವಾರು ರೂ.1,500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

ಯುವನಿಧಿ ಯೋಜನೆಯು ಪ್ರಸಕ್ತ ಸಾಲಿಗೂ ಮುಂದುವರೆದ ಯೋಜನೆಯಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025 ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಯೋಜನೆಯಡಿ ನೋಂದಾಯಿಸಿ ಕೊಳ್ಳಬಹುದಾಗಿರುತ್ತದೆ.

ಇದನ್ನೂ ಓದಿ: Railway ticket booking-ರೈಲ್ವೆ ತತ್ಕಾಲ್ ನಲ್ಲಿ ಟಿಕೆಟ್ ಬುಕ್ ಮಾಡಲು ನೂತನ ನಿಯಮ ಜಾರಿ!

Yuvanidhi

Yuvanidhi Yojane Amount-ಪ್ರತಿ ತಿಂಗಳು ಎಷ್ಟು ಭತ್ಯೆಯನ್ನು ನೀಡಲಾಗುತ್ತದೆ?

ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಈ ಕೆಳಗಿನಂತೆ ಆರ್ಥಿಕ ನೆರವನ್ನು ನೀಡಲಾಗುತ್ತದೆ.

ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು- ರೂ 3,000/-
ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ- ರೂ 1,500/- ಭತ್ಯೆಯನ್ನು ನೀಡಲಾಗುತ್ತದೆ.

How To Apply For Yuvanidhi Scheme-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಸೇವಾಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

Yuvanidhi Online Application-ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ತಮ್ಮ ಮನೆಯಲ್ಲೇ ಇದ್ದು ಮೊಬೈಲ್ ಮೂಲಕ ಈ ಕೆಳಗೆ ನೀಡಿರುವ ಅಧಿಕೃತ ಸೇವಾಸಿಂಧು ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ "Apply Now" ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಸೇವಾಸಿಂಧು ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: PM Kisan Ineligible List-ಈ ರೈತರಿಗಿಲ್ಲ ಪಿಎಂ ಕಿಸಾನ್ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ!

Step-2: ಇದಾದ ಬಳಿಕ ಮುಖಪುಟದಲ್ಲಿ ಕೆಳಗೆ ಬಲಬದಿಯಲ್ಲಿ ಕಾಣುವ "ಯುವನಿಧಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅಗತ್ಯ ಬಳಕೆದಾರ ಐಡಿಯನ್ನು ಮತ್ತು ಪಾಸ್ವರ್ಡ್/OTP ಅನ್ನು ನಮೂದಿಸಿ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಅನ್ನು ಹಾಕಿ ಲಾಗಿನ್ ಅಗಬೇಕು.

ಸೂಚನೆ: ಮೊದಲ ಬಾರಿಗೆ ಈ ತಂತ್ರಾಂಶವನ್ನು ಪ್ರವೇಶ ಮಾಡುತ್ತಿರುವವರು ಇದೆ ಪೇಜ್ ನಲ್ಲಿ ಕೆಳಗೆ ಕಾಣುವ "Register Here" ಬಟನ್ ಮೇಲೆ ಕ್ಲಿಕ್ ಮಾಡಿ ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ದಾಖಲಾತಿಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

1) ಅರ್ಜಿದಾರರ ಅಧಾರ್ ಕಾರ್ಡ
2) ಪೋಟೋ
3) ಅಂಕಪಟ್ಟಿ
4) ನಿರುದ್ಯೋಗ ಪ್ರಮಾಣ ಪತ್ರ
5) ಬ್ಯಾಂಕ್ ಪಾಸ್ ಬುಕ್
6) ಮೊಬೈಲ್ ನಂಬರ್

Self Declaration-ಈಗಾಗಲೇ ಭತ್ಯೆ ಪಡೆಯುತ್ತಿರುವವರು ತಪ್ಪದೇ ಈ ಕೆಲಸ ಮಾಡಿ:

ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಲು ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿ ವಿದ್ಯಾರ್ಥಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಆ ತಿಂಗಳ 01 ರಿಂದ 25 ನೇ ದಿನಾಂಕದ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ನಿರುದ್ಯೋಗಿ ಎಂದು ಸ್ವಯಂ ಘೋಷಣೆಯನ್ನು ನೀಡುವುದು ಕಡ್ಡಾಯವಾಗಿದೆ.

For More Information-ಇನ್ನು ಹೆಚ್ಚಿನ ಮಾಹಿತಿಗಾಗಿ:

ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ.
ಈ ಯೋಜನೆಯ ಅಧಿಕೃತ ಮಾರ್ಗಸೂಚಿ-Download Now
Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್-Apply Now

WhatsApp Group Join Now
Telegram Group Join Now
Share Now: