Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!

April 21, 2025 | Siddesh
Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!
Share Now:

ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವು ನೀಡಲು ರೂಪಿಸಿರುವ ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನವನ್ನು(Vidyasiri scholarship amount increase) ಏರಿಕೆ ಮಾಡಲು ಮುಂದಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ.

ವಿದ್ಯಾಸಿರಿ ಯೋಜನೆಯಡಿ ಯಾರಿಗೆಲ್ಲ ಪ್ರಯೋಜನ ಸಿಗಲಿದೆ? ವಿದ್ಯಾಸಿರಿ ಯೋಜನೆಯಡಿ ಎಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು(Vidyasiri scholarship) ನೀಡಲಾಗುತ್ತದೆ? ಇನ್ನಿತರೆ ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Free Bus-ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ!

ಕರ್ನಾಟಕ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಮಡಿವಾಳ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮವನ್ನು ಘೋಷಿಸಿದೆ. ವಿದ್ಯಾಸಿರಿ ಯೋಜನೆಯಡಿ(Vidyasiri scholarship Amount) ನೀಡಲಾಗುವ ಮಾಸಿಕ ವೇತನವನ್ನು ₹1,500 ರಿಂದ ₹2,000 ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಜೊತೆಗೆ, ಮಡಿವಾಳ ಸಮುದಾಯದ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

Vidyasiri scholarship amount increase-ವಿದ್ಯಾಸಿರಿ ಯೋಜನೆ: ಶಿಕ್ಷಣಕ್ಕೆ ಆಸರೆ: ₹1,500 ರಿಂದ ₹2,000 ಕ್ಕೆ ಏರಿಕೆ:

ವಿದ್ಯಾಸಿರಿ ಯೋಜನೆಯು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ(scholarship schemes in karnataka) ಸಮಾನ ಅವಕಾಶ ಕಲ್ಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ, ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಸ್ಥಾನ ಪಡೆಯಲಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲಾಗುತ್ತದೆ. 2015 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ನಂತರದ ವರ್ಷಗಳಲ್ಲಿ ಈ ಯೋಜನೆಗೆ ಕೆಲವು ತಡೆಗಳು ಎದುರಾಗಿದ್ದವು. ಈಗ ಮತ್ತೆ ಈ ಯೋಜನೆಗೆ ಚೈತನ್ಯ ತುಂಬುವ ಸಲುವಾಗಿ, ಮಾಸಿಕ ವೇತನವನ್ನು ₹2,000 ಕ್ಕೆ ಏರಿಕೆ ಮಾಡಲಾಗಿದೆ.

ಮಡಿವಾಳ ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. “ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಿತರಾಗಬೇಕು. ಶಿಕ್ಷಣವೇ ಅವರ ಜೀವನದಲ್ಲಿ ಗುಣಮಟ್ಟದ ಬದಲಾವಣೆ ತರಬಲ್ಲದು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Home Documents-ಮನೆ ಖರೀದಿಸುವಾಗ ಈ 6 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ!

Vidyasiri scholarship amount

ಈ ನಿಟ್ಟಿನಲ್ಲಿ, ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಏರಿಕೆ ಮಾಡುವ ಜೊತೆಗೆ, ಮಡಿವಾಳ ಸಮುದಾಯದ ವಿದ್ಯಾರ್ಥಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳಾದ ಗುಣಮಟ್ಟದ ವಸತಿ, ಶುದ್ಧ ಕುಡಿಯುವ ನೀರು, ಗ್ರಂಥಾಲಯ ಸೌಲಭ್ಯ ಮತ್ತು ಇತರ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು.

Vidyasiri scholarship Scheme Benefits-ವಿದ್ಯಾಸಿರಿ ಯೋಜನೆಯ ಪ್ರಯೋಜನಗಳು:

ವಿದ್ಯಾಸಿರಿ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣದ ವೆಚ್ಚವನ್ನು ಭರಿಸಲು ಸಹಾಯವಾಗಲಿದೆ. ಈ ಯೋಜನೆಯಿಂದಾಗಿ, ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಮೇಲೆ ಹೆಚ್ಚಿನ ಗಮನ ಹರಿಸಬಹುದು ಮತ್ತು ಆರ್ಥಿಕ ಒತ್ತಡದಿಂದ ಮುಕ್ತರಾಗಬಹುದು. ಹೆಚ್ಚಿನ ವೇತನದೊಂದಿಗೆ, ಪುಸ್ತಕಗಳು, ಸ್ಟೇಷನರಿ, ಮತ್ತು ಇತರ ಶೈಕ್ಷಣಿಕ ಅಗತ್ಯಗಳನ್ನು ಪೂರೈಸಲು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ.

ಇದನ್ನೂ ಓದಿ: Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

ಶಿಕ್ಷಣದ ಅವಕಾಶವನ್ನು ಕಲ್ಪಿಸಲು ಸರ್ಕಾರದ ಬದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ. “ನಮ್ಮ ಸರ್ಕಾರವು ಎಲ್ಲರಿಗೂ ಶಿಕ್ಷಣದ ಅವಕಾಶವನ್ನು ಕಲ್ಪಿಸಲು ಬದ್ಧವಾಗಿದೆ. ವಿದ್ಯಾಸಿರಿ ಯೋಜನೆಯ ಮೂಲಕ ನಾವು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಮತ್ತು ಶೈಕ್ಷಣಿಕ ಬೆಂಬಲವನ್ನು ನೀಡುತ್ತೇವೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

Vidyasiri scholarship Application-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಸಂಬಂಧಪಟ್ಟ ಇಲಾಖೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದಾಗ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನದ ಅರ್ಜಿ ವಿಲೇವಾರಿಯ ಸಲುವಾಗಿ ರೂಪಿಸಿರುವ SSP ತಂತ್ರಾಂಶವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Vidyasiri scholarship Application Link-ಅರ್ಜಿ ಸಲ್ಲಿಸಲು ಲಿಂಕ್- Apply Now

ಇದನ್ನೂ ಓದಿ: Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

Documents For Vidyasiri scholarship-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

1) ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
2) ಬ್ಯಾಂಕ್ ಪಾಸ್ ಬುಕ್/Bank Pass Book
3) ಪೋಟೋ/Photo
4) ವ್ಯಾಸಂಗ ಪ್ರಮಾಣ ಪತ್ರ/Study Certificate
5) ಕಾಲೇಜ್ ಪ್ರವೇಶಾತಿ ಪತ್ರ/College Admission

ಇದನ್ನೂ ಓದಿ: 1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ

Vidyasiri scholarship Yojane-ಭವಿಷ್ಯದ ಯೋಜನೆಗಳು:

ವಿದ್ಯಾಸಿರಿ ಯೋಜನೆಯ ಜೊತೆಗೆ, ರಾಜ್ಯ ಸರ್ಕಾರವು ವಿದ್ಯಾರ್ಥಿ ನಿಲಯಗಳ ಗುಣಮಟ್ಟವನ್ನು ಸುಧಾರಿಸಲು ಮತ್ತು ಶಿಕ್ಷಣದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಅವಕಾಶಗಳನ್ನು ಸೃಷ್ಟಿಸಲು ಯೋಜನೆ ರೂಪಿಸುತ್ತಿದೆ. ಮಡಿವಾಳ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ತರಬೇತಿ ಕಾರ್ಯಕ್ರಮಗಳು, ವೃತ್ತಿಪರ ಮಾರ್ಗದರ್ಶನ, ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವ ಚಿಂತನೆಯೂ ನಡೆಯುತ್ತಿದೆ.

ಕರ್ನಾಟಕ ಸರ್ಕಾರದ ಈ ಉಪಕ್ರಮವು ಮಡಿವಾಳ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಸಶಕ್ತೀಕರಣದ ಹಾದಿಯನ್ನು ಸುಗಮಗೊಳಿಸಲಿದೆ. ವಿದ್ಯಾಸಿರಿ ಯೋಜನೆಯ ಮೊತ್ತವನ್ನು ₹2,000 ಕ್ಕೆ ಏರಿಕೆ ಮಾಡುವುದರ ಜೊತೆಗೆ, ವಿದ್ಯಾರ್ಥಿ ನಿಲಯಗಳಿಗೆ ಸೌಲಭ್ಯಗಳನ್ನು ಒದಗಿಸುವ ಘೋಷಣೆಯು ಸರ್ಕಾರದ ಶಿಕ್ಷಣ-ಕೇಂದ್ರಿತ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ.

WhatsApp Group Join Now
Telegram Group Join Now
Share Now: